ಹುಮನಾಬಾದ್: ‘ಕನ್ನಡ ಭಾಷೆ ಶ್ರೀಮಂತವಾಗಿದೆ. ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ’ ಎಂದು ಮಲ್ಲಯ್ಯ ಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಡಾ.ಬಸವಲಿಂಗ ಅವಧೂತರು ಹೇಳಿದರು.
ಪಟ್ಟಣದಲ್ಲಿ ನಡೆದ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಇಂದಿನ ಯುವಕರು ದುಶ್ಚಟಗಳ ವ್ಯಾಮೋಹಕ್ಕೆ ಒಳಗಾಗಿ ಸುಂದರ ಬದುಕು ನಾಶ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ಹಾಗೂ ಭಾಷಾಭಿಮಾನದ ಬಗ್ಗೆ ತಿಳಿಸುವುದು ಅಗತ್ಯವಾಗಿದೆ ಎಂದರು.
ಮಾಜಿ ಶಾಸಕ ಸುಭಾಷ ಕಲ್ಲೂರು ಮಾತನಾಡಿ,’ಯುವಜನತೆ ಸಾಹಿತ್ಯದ ಕಡೆಗೆ ಒಲವು ತೋರಬೇಕು. ಅಂದಾಗ ಮಾತ್ರ ಸಾಹಿತ್ಯ ಬೆಳೆಸಲು ಸಾಧ್ಯ’ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಶಿವಗಂಗಾ ಮಾತನಾಡಿ,’ಶಿಕ್ಷಕರು ವಿದ್ಯಾರ್ಥಿಗಳಿಗೆ ಸಾಹಿತ್ಯಕ ಜ್ಞಾನ ನೀಡುವುದು ಅವಶ್ಯಕ’ ಎಂದರು.
ಸಮ್ಮೇಳನಾಧ್ಯಕ್ಷ ಶಕೀಲ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಸುರೇಶ ಚನಶೆಟ್ಟಿ, ಬಾಬುದಾನಿ, ನಿರ್ಮಲ ರಾಯಚೂರಕರ್, ಸಚಿನ್ ಮಠಪತಿ, ಮಾಣಿಕ್ಕಪ್ಪ ಬಕ್ಕನ್, ವೀರಣ್ಣ ಕುಂಬಾರ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತೆ ಲಕ್ಷ್ಮಿ ಮೇತ್ರೆ, ಶಿವಶಂಕರ್ ಟೋಕ್ರೆ ಹಾಗೂ ಜಾವೇದ್ ಜಮಾದಾರ ಅವರು ಇದ್ದರು.