News Karnataka Kannada
Monday, May 06 2024
ಬೀದರ್

ಹುಮನಾಬಾದ್ : ‘ಕನ್ನಡ ಅತಿ ಶ್ರೀಮಂತ ಭಾಷೆ’

Humanabad: 'Kannada is the richest language'
Photo Credit : News Kannada

ಹುಮನಾಬಾದ್: ‘ಕನ್ನಡ ಭಾಷೆ‌ ಶ್ರೀಮಂತವಾಗಿದೆ‌. ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ’ ಎಂದು ಮಲ್ಲಯ್ಯ ಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಡಾ.ಬಸವಲಿಂಗ ಅವಧೂತರು ಹೇಳಿದರು.

ಪಟ್ಟಣದಲ್ಲಿ ನಡೆದ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇಂದಿನ ಯುವಕರು ದುಶ್ಚಟಗಳ ವ್ಯಾಮೋಹಕ್ಕೆ ಒಳಗಾಗಿ ಸುಂದರ ಬದುಕು ನಾಶ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ಹಾಗೂ ಭಾಷಾಭಿಮಾನದ ಬಗ್ಗೆ ತಿಳಿಸುವುದು ಅಗತ್ಯವಾಗಿದೆ ಎಂದರು.

ಮಾಜಿ ಶಾಸಕ ಸುಭಾಷ ಕಲ್ಲೂರು ಮಾತನಾಡಿ,’ಯುವಜನತೆ ಸಾಹಿತ್ಯದ ಕಡೆಗೆ ಒಲವು ತೋರಬೇಕು. ಅಂದಾಗ ಮಾತ್ರ ಸಾಹಿತ್ಯ ಬೆಳೆಸಲು ಸಾಧ್ಯ’ ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಶಿವಗಂಗಾ ಮಾತನಾಡಿ,’ಶಿಕ್ಷಕರು ವಿದ್ಯಾರ್ಥಿಗಳಿಗೆ ಸಾಹಿತ್ಯಕ ಜ್ಞಾನ ನೀಡುವುದು ಅವಶ್ಯಕ’ ಎಂದರು.

ಸಮ್ಮೇಳನಾಧ್ಯಕ್ಷ ಶಕೀಲ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಸುರೇಶ ಚನಶೆಟ್ಟಿ, ಬಾಬುದಾನಿ, ನಿರ್ಮಲ ರಾಯಚೂರಕರ್, ಸಚಿನ್‌ ಮಠಪತಿ, ಮಾಣಿಕ್ಕಪ್ಪ ಬಕ್ಕನ್, ವೀರಣ್ಣ ಕುಂಬಾರ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತೆ ಲಕ್ಷ್ಮಿ ಮೇತ್ರೆ, ಶಿವಶಂಕರ್ ಟೋಕ್ರೆ ಹಾಗೂ ಜಾವೇದ್ ಜಮಾದಾರ ಅವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು