ಹುಮನಾಬಾದ್: ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಮಾಣಿಕಸೌಧದಲ್ಲಿ ಭಾರತೀಯ ಜನತಾ ಪಕ್ಷ ಹುಮನಾಬಾದ ಮಂಡಲದಿಂದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕ್ಷೇತ್ರದ ನೂತನ ಶಾಸಕ ಡಾ. ಸಿದ್ದಲಿಂಗಪ್ಪಾ(ಸಿದ್ದು)ಪಾಟೀಲರವರು ಪಾಲ್ಗೊಂಡು ಭಾಗಿಯಾದ ಎಲ್ಲ ಕಾರ್ಯಕರ್ತರ ಮೇಲೆ ಹೂ ಸುರಿಸುವ ಮೂಲಕ ಅಭಿನಂದಿಸಿ ಕೃತಜ್ಞತೆ ಅರ್ಪಿಸಿದ್ದರು.
ಬಳಿಕ ಮಾತಾಡಿದ ಶಾಸಕರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಎಲ್ಲಾ ಹಿರಿಯರು, ಮಾರ್ಗದರ್ಶಕರು, ಸಹೋದರರು, ಮಾತೆಯರು,ಸಹೋದರಿಯರು ತೋರಿದ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರ ಋಣಿಯಾಗಿರುತ್ತೇನೆ.ನಿಮೆಲ್ಲರ ಆಶೆಯಗಳನ್ನು ಈಡೇರಿಸಲು ನಿರಂತರವಾಗಿ ಶ್ರಮಿಸುತ್ತೇನೆ ಎಂದು ಹೇಳಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಶಿಲ್.ಜಿ.ನಮೋಶಿ, ಮಾಜಿ ಶಾಸಕರಾದ ಸುಭಾಷ ಕಲ್ಲೂರ, ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಳಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಕಾರ್ಜುನ ಕುಂಬಾರ, ಬಸವರಾಜ ಆರ್ಯ,ಪದ್ಮಾಕರ ಪಾಟೀಲ, ಮಂಡಲದ ಅಧ್ಯಕ್ಷರಾದ ಪ್ರಭಾಕರ ನಾಗರಾಳೆ, ಗಜೇಂದ್ರ ಕನಕಟಕರ್,ಸಹೋದರರಾದ ಸಂತೋಷ ಪಾಟೀಲ, ಸುನೀಲ ಪಾಟೀಲ, ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಉಷಾರಾಣಿ ರೆಡ್ಡಿ, ಧನಲಕ್ಷ್ಮೀ ಶಿವಕುಮಾರ ತೀರ್ಥ, ಗಿರೀಶ ಪಾಟೀಲ, ರವಿ ಹೊಸ್ಸಳ್ಳಿ, ಅಭಿಮನ್ಯು ನಿರಗುಡಿ, ಮಧುಕರ ಹಿಲಾಲಪೂರ, ಪ್ರವೀಣ ರಾಜಪೂರೆ, ವಿನಾಯಕ್ ಮಂಡಾ, ಸೂರ್ಯಕಾಂತ ಮಠಪತಿ, ಶಿವಶಂಕರ ತರನಳ್ಳಿ, ಅನಿಲ ಪಸಾರ್ಗಿ, ರೇವಣಪ್ಪಾ ಹೂಗಾರ, ನಾರಾಯಣ ರಾಂಪೂರೆ, ವೈಜಿನಾಥ ಪಾಟೀಲ, ಗಿರೀಶ ತುಂಬಾ, ನಾಗಭೂಷಣ ಸಂಗಮ್, ಸಂತೋಷ ನಾವದಗಿ, ಗೋಪಾಲಕೃಷ್ಣ ಮೋಹಳೆ, ಪಕ್ಷದ ಮಹಾಶಕ್ತಿ ಮತ್ತು ಶಕ್ತಿ ಕೇಂದ್ರ ಅಧ್ಯಕ್ಷರು, ಬೂತ್ ಕೇಂದ್ರ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.
ಶಾಲೆಗಳ ಬಾಂಬ್ ಬೆದರಿಕೆ ಬೆನ್ನಲ್ಲೆ ಇದೀಗ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್ನಲ್ಲಿದ್ದ ಟಿಶ್ಯೂ ಪೇಪರ್ನಲ್ಲಿ ಬೆದರಿಕೆ…
ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…
ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…
ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಅಮಾನತು ಮಾಡಿ ಆದೇಶ…