News Karnataka Kannada
Monday, April 29 2024
ಬೀದರ್

ಹುಮನಾಬಾದ್: ಬಿಜೆಪಿ 5 ಕ್ಷೇತ್ರಗಳಲ್ಲಿ ಗೆದ್ದರೆ ರಾಜಕೀಯ ಸನ್ಯಾಸ- ಶಾಸಕ ರಾಜಶೇಖರ ಪಾಟೀಲ

Humnabad: If BJP wins five seats, it will be a political sanyas: Mla Rajashekar Patil
Photo Credit : News Kannada

ಹುಮನಾಬಾದ್: ‘ಬೀದರ್‌ ಜಿಲ್ಲೆಯ ಎಲ್ಲ 6 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಯಂತೆ 6 ಕ್ಷೇತ್ರ ಬೇಡ, ಬಿಜೆಪಿ 5 ಕ್ಷೇತ್ರದಲ್ಲಿ ಗೆದ್ದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸಲು ಸಿದ್ಧನಿದ್ದೇನೆ.

ಒಂದು ವೇಳೆ ಈ ಐದು ಕ್ಷೇತ್ರದಲ್ಲಿ ಗೆಲ್ಲದಿದ್ದರೆ ಅವರು ರಾಜಕೀಯ ಸನ್ಯಾಸ ಸ್ವೀಕರಿಸಲು ಸಿದ್ಧರಾಗುತ್ತಾರೆಯೇ?’ ಎಂದು ಶಾಸಕ ರಾಜಶೇಖರ ಪಾಟೀಲ ಸವಾಲು ಹಾಕಿದರು.

‘ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಆದರೆ ಈ ಅಭಿವೃದ್ಧಿ ಕಾಮಗಾರಿಗಳು ಬಿಜೆಪಿಯ ಮುಖಂಡರಿಗೆ ಕಾಣುತ್ತಿಲ್ಲ. ಏಕೆಂದರೆ ಅವರಿಗೆ ಕಾಮಾಲೆ (ಕಾಮಣಿ) ಆಗಿದೆ. ಹೀಗಾಗಿ ಕಾಮಾಲೆ ಕಣ್ಣಿಗೆ ಕಂಡಿದ್ದೆಲ್ಲವೂ ಹಳದಿ ಆಗಿಯೇ ಕಾಣಿಸುತ್ತದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದರು.

‘ಕಾಂಗ್ರೆಸ್ ಪಕ್ಷದಲ್ಲಿಯೇ ಹೆಸರು ಮಾಡಿ ಇಂದು ಕಾಂಗ್ರೆಸ್ ಪಕ್ಷವನ್ನೇ ಮುಕ್ತ ಮಾಡುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. 120 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಮುಕ್ತ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಫೆ.4ರಂದು ಸಂಜೆ 5.30ಕ್ಕೆ ಹುಮನಾಬಾದ್ ಪಟ್ಟಣದಲ್ಲಿ ನಡೆಯುವ ‘ಪ್ರಜಾ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ತಾ.ಪಂ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಫ್ಸರ್‌ಮಿಯ, ಮಲ್ಲಿಕಾರ್ಜುನ ಮಾಶೆಟ್ಟಿ, ಉಮೇಶ ಜಮಗಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು