News Karnataka Kannada
Sunday, May 05 2024
ಬೀದರ್

ಕೃಷಿ ಮೇಳಕ್ಕೆ ಚಾಲನೆ ನೀಡುತ್ತಿರುವುದು ತುಂಬಾ ಸಂತೋಷವಾಗಿದೆ-ಶಾಸಕ ಈಶ್ವರ ಬಿ.ಖಂಡ್ರೆ

I am very happy to be inaugurating the Krishi Mela: MLA Ishwar B Khandre
Photo Credit : News Kannada

ಬೀದರ್, ಜ.7: ಬೀದರ ಉತ್ಸವದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡುತ್ತಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಭಾಲ್ಕಿ ಶಾಸಕರಾದ ಈಶ್ವರ ಬಿ. ಖಂಡ್ರೆ ಹೇಳಿದರು.

ಅವರು ಶನಿವಾರ ಬೀದರ ಉತ್ಸವದ ಅಂಗವಾಗಿ ಬೀದರ ಕೋಟೆಯಲ್ಲಿ ಹಮ್ಮಿಕೊಂಡಿದ್ದ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೀದರ ಉತ್ಸವದಲ್ಲಿ ಅತ್ಯಂತ ಮಹತ್ವದ ಉತ್ಸವೇಂದರೆ ಕೃಷಿ ಉತ್ಸವವಾಗಿರುತ್ತದೆ, ರೈತರು ಏಕೆ ಸಂಕಷ್ಟದಲ್ಲಿದ್ದಾರೆAದು ನಾವು ಅರಿತುಕೊಳ್ಳಬೇಕೊಳ್ಳಬೇಕು, ರೈತರಿಗೆ ವಿಮಾ ಫಸಲ್‌ಯೋಜನೆ ಜಾರಿಗೆ ತಂದರೂ ಹೆಚ್ಚಿನ ರೈತರಿಗೆ ಲಾಭ ಸಿಗುತ್ತಿಲ್ಲ. ಉದಾರೀಕರಣ, ಜಾಗತೀಕರಣದಿಂದ ಕೃಷಿಕರಿಗೆ ಆದಾಯ ಬರುತ್ತಿಲ್ಲ ಬೆಳೆಗಳ ಕಡಿತವಾದ ಕಾರಣಗಳನ್ನು ಗಮನಿಸಿಕೊಳ್ಳಬೇಕು, ನೀರಾವರಿ ಯೋಜನೆ ರೈತರಿಗೆ ಹೆಚ್ಚು ವಿದ್ಯುತ್ ಸಂಪರ್ಕವನ್ನು ನೀಡಬೇಕು. ರೈತರು ಮಾರುಕಟ್ಟೆಯಲ್ಲಿ ಬೆಳೆದ ಬೆಳೆಗಳಿಗೆ ಬೆಲೆ ಕಡಿಮೆಯಾಗುತ್ತಿರುವುದರಿಂದ ರೈತರು ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ, ರೈತರಿಗಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡಬೇಕೆಂದು ಹೇಳಿದರು.

ನಮ್ಮ ಜಿಲ್ಲೆಯ ರೈತರಿಗೆ 10 ಲಕ್ಷ ಎಕರೆಯಲ್ಲಿ ಜೇನುಗಾರಿಕೆ, ತೋಟಗಾರಿಕೆ, ಹೈನುಗಾರಿಕೆಗೆ ಬೇಕಾಗುವ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ಪರಿಹಾರ ಧನ ಅಥವಾ ವಿಶೇಷ ಪ್ಯಾಕೇಜ್‌ಗಳನ್ನು ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡುತ್ತೇನೆ.

ಈ ಸಂದರ್ಭದಲ್ಲಿ ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಹ ಸಚಿವರಾದ ಭಗವಂತ ಖೂಬಾ, ಬೀದರ ಶಾಸಕರಾದ ರಹೀಮ ಖಾನ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ವಿಧಾನ ಪರಿಷತ್ ಶಾಸಕರಾದ ರಘುನಾಥರಾವ ಮಲ್ಕಾಪೂರೆ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡೆಕ್ಕಾ ಕಿಶೋರ ಬಾಬು, ಗುರುನಾಥ ಕೊಳ್ಳೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು