ಬೀದರ್ : ‘ಡಿ. 13ರಂದು ಜಿಲ್ಲೆಯ ಹಲವೆಡೆ ಲೋಕಾಯುಕ್ತ ಪೊಲೀಸರು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನ್ಯಾಯ ಸಮ್ಮತ ಕೆಲಸಗಳಿಗೆ ಲಂಚದ ಬೇಡಿಕೆ ಇಟ್ಟರೆ ಅಂತಹ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ದೂರು ಕೊಟ್ಟರೆ ಸ್ವೀಕರಿಸಿ ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತ ಕಲಬುರಗಿ ವಿಭಾಗದ ಡಿವೈಎಸ್ಪಿ ಎ.ಆರ್.ಕರ್ನೂಲ್ ತಿಳಿಸಿದ್ದಾರೆ.
‘ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಮೂಡಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾಧ್ಯವಾದಲ್ಲಿ ಅಲ್ಲಿಯೇ ದೂರುದಾರರ ಅಹವಾಲು ಬಗೆಹರಿಸಲಾಗುವುದು. ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಫಾರಂ ನಂ.1 ಮತ್ತು 2ರಲ್ಲಿ ಭರ್ತಿ ಮಾಡಿ ಸಲ್ಲಿಸಬಹುದು’ ಎಂದು ಸೋಮವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಂದ ಜಿಲ್ಲೆಯ ವಿವಿಧೆಡೆ ಅಹವಾಲು ಸ್ವೀಕರಿಸುವ ಸಮಯದ ಮಾಹಿತಿ ಇಂತಿದೆ. ಡಿ.13ರಂದು ಬೀದರ್ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಹುಲಸೂರು ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಬಸವಕಲ್ಯಾಣದ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ, ಭಾಲ್ಕಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಹುಮನಾಬಾದ್ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ, ಚಿಟಗುಪ್ಪ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಔರಾದ್ (ಬಿ) ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಕಮಲನಗರ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳು ಇಂತಿವೆ. ಲೋಕಾಯುಕ್ತ ಕಲಬುರಗಿ ಡಿವೈಎಸ್ಪಿ ಎ.ಆರ್. ಕರ್ನೂಲ್ -9880413329, ಬೀದರ್ ಡಿವೈಎಸ್ಪಿ ಎನ್.ಎಂ.ಓಲೇಕಾರ- 9364062571, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸಂತೋಷಕುಮಾರ-9364062672, ಪ್ರದೀಪ್ ಕೊಳ್ಳಾ -9364062673, ಬಾಬಾಸಾಹೇಬ ಪಾಟೀಲ-9364062674, ವಾಹೇದ ಹುಸೇನ್ ಕೊತ್ವಾಲ್-9364062675.
ಹೆಚ್ಚಿನ ಮಾಹಿತಿಗೆ, ನೇರ ದೂರು ಸಲ್ಲಿಕೆಗೆ ನಗರದ ಕೆಎಚ್ಬಿ ಕಾಲೊನಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.