ಬೀದರ್: 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್, ವಾಹನ ಜಪ್ತಿ, ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಗಡಿ ಬೀದರ್ ಜಿಲ್ಲೆಯ ಹುಮನಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಧುಮ್ಮನಸೂರ ಗ್ರಾಮದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಜಪ್ತಿ ಮಾಡಿದ ಪೋಲಿಸರು .
ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, ಹುಮನಾಬಾದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಧುಮ್ಮನಸೂರ ಗ್ರಾಮದ ವ್ಯಾಪ್ತಿಯ ಹೊಲ ಒಂದರಲ್ಲಿ ಅಕ್ರಮವಾಗಿ ಹೆಚ್.ಪಿ ಮತ್ತು ಇಂಡೇನ್ ಕಂಪನಿಯ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದಿಂದ ವಾಣಿಜ್ಯ ಸಿಲಿಂಡರ್ ಗಳಲ್ಲಿ ಅನಧಿಕೃತವಾಗಿ ಗ್ಯಾಸನ್ನು ತುಂಬಿ ತೆಲಂಗಾಣ ರಾಜ್ಯದಲ್ಲಿ ಅಧಿಕ ಲಾಭಕ್ಕಾಗಿ ಅಕ್ರಮವಾಗಿ ಮಾರಾಟ ಮಾಡಲು ಸಿದ್ಧತೆ ಮಾಡುತ್ತಿರುವ ಮಾಹಿತಿ ಆಧಾರದ ಮೇಲೆ ಹುಮನಾಬಾದ ಪೊಲೀಸ್ ಠಾಣೆಯ ಪಿ.ಎಸ್.ಐ ಬಸವರಾಜು ಮತ್ತು ಸಿಬ್ಬಂದಿಗಳಾಧ ವಜೀರ ಪಟೇಲ್,ಸಂತೋಷ, ಚನ್ನವೀರ,ರವಿ, ಹಾಗೂ ಹುಮನಾಬಾದ ತಾಲೂಕಿನ ಆಹಾರ ನಿರೀಕ್ಷಕರಾದ ಬಿಂದುಕುಮಾರಿ, ನೇತೃತ್ವದಲ್ಲಿ ಮಾಡಿದರು .
ದಾಳಿಯಲ್ಲಿ ತುಂಬಿದ 171 ಸಿಲಿಂಡರ್ ಗಳು, 145 ಖಾಲಿ ಸಿಲಿಂಡರುಗಳು ಒಟ್ಟು 316 ಸಿಲಿಂಡರುಗಳು ಜಪ್ತಿ ಮಾಡಿದ್ದಾರೆ. ಅಂದಾಜು ಮೌಲ್ಯ 8,95,676=00 ರೂಪಾಯಿ ಹಾಗೂ 3 ಗೂಡ್ಸ್ ವಾಹನಗಳು ಅಂದಾಜು ಮೌಲ್ಯ 9,00,000=00 ರೂಪಾಯಿ, 3 ಮೋಟಾರ್ ಗಳು (2 Hp)ಅಂದಾಜು ಮೌಲ್ಯ 15,000=00 ರೂಪಾಯಿ, 3 ತೂಕ ಅಳತೆ ಮಾಡುವ ಎಲೆಟ್ರೀಕಲ್ ಮಷೀನ್ ಅಂದಾಜು ಮೌಲ್ಯ 6,000=00 ರೂಪಾಯಿ, ಹೀಗೆ ಒಟ್ಟು ಅಂದಾಜು ಮೌಲ್ಯ 18,16,676=00 ರೂ ಮೌಲ್ಯವುಗಳನ್ನು ವಶ ಪಡಿಸಿಕೊಂಡು ಆರೋಪಿಗಳ ವಿರುದ್ದ ಹುಮನಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿಯಲ್ಲಿ ಪಾಲ್ಗೊಂಡ ಹುಮನಾಬಾದ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಶ್ಲಾಘಿಸಿದ್ದಾರೆ
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…