Categories: ಬೀದರ್

ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬಂದಲ್ಲಿ ಮಾಹಿತಿ ನೀಡಿ: ಎಂ.ಡಿ. ಇಸ್ಮಾಯಿಲ್ ಇನಾಮದಾರ

ಬೀದರ್: ಜೀವನದಲ್ಲಿ ಬರುವ ಕಷ್ಟಗಳಿಗೆ ವಿದ್ಯಾರ್ಥಿಗಳು ಎದೆಗುಂದಬಾರದು ಇದರಿಂದ ಮಾದಕ ವಸ್ತುಗಳ ಸೇವನೆ ಕಡೆಗೆ ವಾಲುವ ಸಾಧ್ಯತೆ ಇರುತ್ತದೆ ಆದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸಬೇಕು ಮತ್ತು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಬೀದರ್ ಅಬಕಾರಿ ಉಪ ಆಯುಕ್ತ ಎಂ.ಡಿ ಇಸ್ಮಾಯಿಲ್ ಇನಾಮದಾರ ಹೇಳಿದರು.

ಅವರು ಸೋಮವಾರ ನಗರದ ಗುರುನಾನಕ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪಂಚಾಯತ ಬೀದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುರುನಾನಕ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ಒತ್ತಡಗಳನ್ನು ಕಡಿಮೆ ಮಾಡಲು ಯೋಗ, ಪ್ರಾಣಯಾಮ ಮಾಡಬೇಕು. ಜೀವದಲ್ಲಿ ಆದಷ್ಟು ಸಜ್ಜನರ ಸಂಘ ಮಾಡುವುದನ್ನು ರೂಡಿಸಿಕೊಳ್ಳಬೇಕು. ಮಾದಕ ವಸ್ತುಗಳ ಮಾರಾಟದ ಜಾಲಗಳು ತಮ್ಮ ಗಮನಕ್ಕೆ ಬಂದಲ್ಲಿ ತಕ್ಷಣ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಇದರಿಂದ ಮಾದಕ ವಸ್ತುಗಳ ವಹಿವಾಟನ್ನು ನಿಯಂತ್ರಿಸಬಹುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರತಿಕಾಂತ ಸ್ವಾಮಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಭವಿಷ್ಯಕ್ಕಾಗಿ ಆದಷ್ಟು ಉತ್ತಮ ವಾತವರಣ ನಿರ್ಮಿಸಬೇಕು.

ಮತ್ತು ರಾಮಾಯಣ – ಮಹಭಾರತದಂತಹ ಪೌರಾಣಿಕ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಒಳ್ಳೆಯ ಸಂಸ್ಕಾರ ನೀಡಬೇಕು ಎಂದರು. ವಿದ್ಯಾರ್ಥಿಗಳು ಜೀವನದಲ್ಲಿ ಧನಾತ್ಮಕ ಚಿಂತನೆಗಳನ್ನು ಹೆಚ್ಚು ಮಾಡಬೇಕು. ಋಣಾತ್ಮಕ ಚಿಂತನೆಗಳತ್ತ ವಾಲಬಾರದು ಮತ್ತು ಜೀವನದಲ್ಲಿ ಉತ್ತಮ ಗುರಿ ಇಟ್ಟು ಮುಂದೆ ಸಾಗಬೇಕು.

ತಮ್ಮ ಸುತ್ತಮುತ್ತಲು ಯಾರಾದರು ಮಾದಕ ವೇಸನಕ್ಕೆ ಬಲಿಯಾಗಿದ್ದು ಕಂಡುಬಂದಲ್ಲಿ ಅವರಿಗೆ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು.

ಅಗತ್ಯಬಿದ್ದಲ್ಲಿ ನಮ್ಮ ಬೀದರ ಬ್ರೀಮ್ಸ್ ಆಸ್ಪತ್ರೆಯಲ್ಲಿರುವ ವೇಸನ ಮುಕ್ತ ಕೇಂದ್ರಕ್ಕೂ ಸಹ ಭೇಟಿ ನೀಡಬಹುದು ಎಂದರು.

ಬೀದರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಕಲಿ ಮಾತನಾಡಿ, ಇತ್ತೀಚೆಗೆ ಯುವಕರು ಮಾದಕ ವಸ್ತುಗಳ ಸೇವನೆಗಳತ್ತ ಹೆಚ್ಚು ಮುಖ ಮಾಡುತ್ತಿರುವುದು ದೊಡ್ಡ ದುರಂತ. ಸರ್ಕಾರ ಈ ಮಾದಕ ವಸ್ತುಗಳನ್ನು ಅಕ್ರಮವಾಗಿ ಬೆಳೆಸುವುದು, ಮಾರಾಟ ಮಾಡುವುದು ಸೇರಿದಂತೆ ಸೇವನೆ ಮಾಡುವವರ ವಿರುದ್ಧವು ಸಹ ಕಠಿಣ ಕ್ರಮಗಳನ್ನು ಜರುಗಿಸುತ್ತಿದೆ.ಆದರೂ ನಗರಿಕರಣ ಹೆಚ್ಚಿದಂತೆ ಈ ಮಾದಕ ವಸ್ತುಗಳ ನಿಯಂತ್ರಣವು ಸಹ ಅಷ್ಟೆ ಕಷ್ಠಕರವಾಗಿದೆ. ಆದರಿಂದ ಯುವಕರು ಇಂತಹ ದುಷ್ಚಟಗಳತ್ತ ವಾಲಬಾರದು ಎಂದು ಹೇಳಿದರು.

ಪ್ರಸ್ತುತ ಪಾಕಿಸ್ತಾನ, ಅಫಘಾನಿಸ್ತಾನ, ಇರಾನ, ಥೈಲ್ಯಾಂಡ್ ಸೇರಿದಂತೆ ವಕ್ರ ದೃಷ್ಠಿಕೋನ ಹೊಂದಿದ ಇತರೆ ರಾಷ್ಟ್ರಗಳು ಭಾರತಕ್ಕೆ ವಾಮಮಾರ್ಗದಿಂದ ಮಾದಕ ವಸ್ತುಗಳನ್ನು ಸಾಗಾಣಿಕೆ ಮಾಡುತ್ತಿವೆ, ಆದರು ನಮ್ಮ ಭಾರತ ಸರ್ಕಾರ ಇವುಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ ಇದರ ಫಲವಾಗಿ ಇತ್ತಿಚೇಗೆ ಅಕ್ರಮ ಮಾದಕ ವಸ್ತುಗಳ ಸಾಗಾಣಿಕೆ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿವೆ ಎಂದ ಅವರು ವಿದ್ಯಾರ್ಥಿಗಳು ಇಂತಹ ಮಾದಕ ವಸ್ತುಗಳ ಸೇವನೆಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.

ಅತಿಥಿ ಉಪನ್ಯಾಸ ನೀಡಿದ ಬೀದರ್ ಬ್ರೀಮ್ಸ್  ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೆರಿ, ವಿದ್ಯಾರ್ಥಿಗಳು ತಮಗೆ ಅರಿವಿಗೆ ಬಾರದೆ ದುಷ್ಚಟಗಳತ್ತ ಹೋಗುತ್ತೀರಿ ಇದನ್ನು ಅರಿಯಬೇಕು. ಇತ್ತೀಚಿನ ಯುವ ಸಮೂಹ ಸಮಾಜಿಕ ಜಾಲತಾನಗಳಿಗೆ ಮಾರುಹೊಗುತ್ತಿದೆ. ಸಮಾಜಿಕ ಜಾಲತಾಣವು ಉತ್ತಮ ಹಾಗೂ ಕೆಟ್ಟ ಎರಡು ಮಾಹಿತಿಯನ್ನು ನೀಡುತ್ತದೆ ಆದರೆ ಅದರಿಂದ ಯಾವುದನ್ನು ಆರಿಸಿಕೊಳ್ಳಬೇಕು ಎನ್ನುವುದು ನಿಮ್ಮ ಕೈಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಗುರುನಾನಕ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲಕಿ ಶಾಮಲ ವಿ. ದತ್ತಾ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಕಿರಣ ಎಂ. ಪಾಟೀಲ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯ ಡಾ. ಅಮಲ್ ಶರಿಫ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ, ಜಿಲ್ಲಾ ಮಾನಸಿಕ ವಿಭಾಗದ ಮನೋಶಾಸ್ತ್ರ ಜ್ಞ ಮಲ್ಲಿಕಾರ್ಜುನ ಗುಡ್ಡೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಆಪ್ತಸಮಲೋಚಕಿ ರೇಣುಕಾ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಆಪ್ತಸಮಲೋಚಕ ಸಿಮಪ್ಪಾ ಬಿ. ಸರಕೊರೆ, ಜಿಲಾನಿ, ಶರಣಬಸಪ್ಪಾ, ಸಂಗಮೇಶ, ಪ್ರಮೋದ ರಾಠೋಡ, ಪರಶುರಾಮ, ಅಂಬಾದಾಸ ಸೇರಿದಂತೆ ಗುರುನಾನಕ ಪದವಿ ಮಹಾವಿದ್ಯಾಲಯದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago