News Karnataka Kannada
Saturday, May 04 2024
ಬೀದರ್

ಮಾದಿಗ ಸಮಾಜಕ್ಕೆ ಅನ್ಯಾಯ : ಆಕ್ರೋಶ ವ್ಯಕ್ತಪಡಿಸಿದ ಸ್ವಾಮಿದಾಸ ಕೆಂಪೆನೋರ್‌

Injustice done to Madiga samaj: Swamidas Kempenor
Photo Credit : News Kannada

ಬೀದರ್: ‘ಕಾಂಗ್ರೆಸ್‌ ಮೂರು ಹಂತಗಳಲ್ಲಿ ವಿಧಾನಸಭೆ ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಿದರೂ ಕಲ್ಯಾಣ ಕರ್ನಾಟಕದ ಒಂದು ಕ್ಷೇತ್ರದಲ್ಲೂ ಮಾದಿಗ ಸಮುದಾಯ ಅಭ್ಯರ್ಥಿಗೆ ಟಿಕೆಟ್‌ ನೀಡಿಲ್ಲ. ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದೆ’ ಎಂದು ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಸಂಸ್ಥಾಪಕ ಸ್ವಾಮಿದಾಸ ಕೆಂಪೆನೋರ್‌ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಪಾಠ ಮಾಡುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತಳ ಸಮುದಾಯಗಳನ್ನು ಕಡೆಗಣಿಸುತ್ತಲೇ ಬಂದಿವೆ. ಅಲ್ಲದೇ ಸಮುದಾಯದ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಚುನಾವಣೆಯಲ್ಲಿ ಎರಡೂ ಪಕ್ಷಗಳಿಗೆ ತಕ್ಕ ಉತ್ತರ ಕೊಡಲಾಗುವುದು’ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಎಚ್ಚರಿಸಿದರು.

‘ರಾಷ್ಟ್ರೀಯ ಪಕ್ಷಗಳು ಮೊದಲಿನಿಂದಲೂ ಮಾದಿಗ ಸಮುದಾಯವನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡು ಬಂದಿವೆ. ಸಮುದಾಯವನ್ನು ಸಾಮಾಜಿಕ ಹಾಗೂ ರಾಜಕೀಯವಾಗಿ ಮೇಲೆತ್ತಬೇಕು ಎನ್ನುವ ಕಿಂಚಿತ್ತೂ ಕಾಳಜಿ ಇಲ್ಲ. ರಾಜಕೀಯವಾಗಿಯೂ ತುಳಿಯುತ್ತ ಬಂದಿವೆ. ಈ ಪಕ್ಷಗಳಿಗೆ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗಲಿದೆ’ ಎಂದು ಹೇಳಿದರು.

ಅಸೋಸಿಯೇಷನ್ ಉಪಾಧ್ಯಕ್ಷ ನವೀನ್ ಅಲ್ಲಾಪೂರ, ಜಿಲ್ಲಾ ಘಟಕದ ಅಧ್ಯಕ್ಷ ಕಮಲಹಾಸನ್ ಬಾವಿದೊಡ್ಡಿ ಹಾಗೂ ಮಾದಾರ ಚೆನ್ನಯ್ಯ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ರಮೇಶ ಕಟ್ಟಿತುಗಾಂವ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು