News Karnataka Kannada
Sunday, May 12 2024
ಬೀದರ್

ಕನ್ನಡ ನಾಮಫಲಕ ಅಳವಡಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

'ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ಹೋಟೆಲ್‌, ಅಂಗಡಿ ಮುಂಗಟ್ಟಿನವರು ನಾಮಫಲಕಗಳ ಮೇಲೆ ಶೇ 60ರಷ್ಟು ಕನ್ನಡ ಭಾಷೆಯಲ್ಲಿ ಹೆಸರು ಬರೆಸಬೇಕು. ಇಲ್ಲವಾದರೆ ಅವುಗಳನ್ನು ಸಂಘಟನೆಯ ಕಾರ್ಯಕರ್ತರು ಕಿತ್ತೆಸೆಯುವರು' ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದರು.
Photo Credit :

ಬೀದರ್‌: ‘ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ಹೋಟೆಲ್‌, ಅಂಗಡಿ ಮುಂಗಟ್ಟಿನವರು ನಾಮಫಲಕಗಳ ಮೇಲೆ ಶೇ 60ರಷ್ಟು ಕನ್ನಡ ಭಾಷೆಯಲ್ಲಿ ಹೆಸರು ಬರೆಸಬೇಕು. ಇಲ್ಲವಾದರೆ ಅವುಗಳನ್ನು ಸಂಘಟನೆಯ ಕಾರ್ಯಕರ್ತರು ಕಿತ್ತೆಸೆಯುವರು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದರು.

ಮಾರ್ಚ್‌ 5ರಿಂದ ಪರಭಾಷೆ ನಾಮಫಲಕ ಕಿತ್ತೆಸೆದು ಕನ್ನಡ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುವುದು. ಸುಮಾರು 500 ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಐದು ತಂಡಗಳನ್ನು ರಚಿಸಲಾಗಿದೆ. ಒಂದು ತಂಡದಲ್ಲಿ ಸುಮಾರು ನೂರು ಜನ ಕಾರ್ಯಕರ್ತರು ಇರಲಿದ್ದಾರೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಸಿದ್ಧಾರ್ಥ ಕಾಲೇಜು, ಚಿಟ್ಟಾ ಕ್ರಾಸ್‌, ನೌಬಾದ್‌, ಫತ್ತೆ ದರ್ವಾಜಾ ಮತ್ತು ಶಹಾಪುರ ಗೇಟ್‌ನಿಂದ ಬಸವೇಶ್ವರ ವೃತ್ತದವರೆಗೆ ಹೋರಾಟ ನಡೆಯಲಿದೆ ಎಂದು ವಿವರಿಸಿದರು.

ವೇದಿಕೆಯ ಪ್ರಮುಖರಾದ ಅನೀಲ ಹೆಡೆ, ವೀರಶೆಟ್ಟಿ ಗೌಸಪುರೆ, ಸುಭಾಷ ಗಾಯಕವಾಡ, ಸಚಿನ ಬೆನಕನಳ್ಳಿ, ವಿನಾಯಕ ರೆಡ್ಡಿ ಬುಧೇರಾ, ವಿವೇಕ ನಿರ್ಮಳೆ, ಪ್ರಭು ಯಾಕತಪುರ, ಸೋಮಶೇಖರ ಸಜ್ಜನ್, ಉದಯಕುಮಾರ ಅಷ್ಟೂರೆ, ಗೋಪಾಲ ಕುಲಕರ್ಣಿ, ಮಹೇಶ ಕಾಪಸೆ, ಲಕ್ಷ್ಮಣ ಅಟಕಾರ, ವಿಶ್ವನಾಥಗೌಡ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು