News Karnataka Kannada
Monday, April 29 2024
ಬೀದರ್

ಬೀದರ್‌ ಲೋಕಸಭೆ ಟಿಕೆಟ್‌ಗೆ ತೀವ್ರ ಪೈಪೋಟಿ : ಇಂದು ದೆಹಲಿಗೆ ಖಂಡ್ರೆ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಟಿಕೆಟ್‌ ವಿಚಾರವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಕೆಲವು ಕಡೆ ಸ್ವಪಕ್ಷಗಳಲ್ಲಿ ಬಂಡಾಯದ ಹೊಗೆಯಾಡುತ್ತಿದೆ.
Photo Credit : News Kannada

ಬೀದರ್ : ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಟಿಕೆಟ್‌ ವಿಚಾರವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಕೆಲವು ಕಡೆ ಸ್ವಪಕ್ಷಗಳಲ್ಲಿ ಬಂಡಾಯದ ಹೊಗೆಯಾಡುತ್ತಿದೆ.

ಬೀದರ ಲೋಕ ಸಭೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಸಚಿವ ಈಶ್ವರ್ ಖಂಡ್ರೆ ಹಾಗೂ ರಾಜಶೇಖರ್ ಪಾಟೀಲ್ ನಡುವೆ ಪೈಪೋಟಿ ನಡೆದಿದೆ. ಪುತ್ರ ಸಾಗರ್ ಖಂಡ್ರೆಗೆ ಟಿಕೆಟ್ ನೀಡುವಂತೆ ಈಶ್ವರ್ ಖಂಡ್ರೆ ಪಟ್ಟು ಹಿಡಿದಿದ್ದಾರೆ. ಅತ್ತ ರಾಜಶೇಖರ ಪಾಟೀಲರೂ ಟಿಕೆಟ್ ಪಡೆಯಲು ಹೋರಾಟ ನಡೆಸಿದ್ದಾರೆ.

ಟಿಕೆಟ್‌ ವಿಚಾರವಾಗಿ ಇಂದು ದೆಹಲಿಗೆ ತೆರಳಲಿರುವ ಸಚಿವ ಈಶ್ವರ್ ಖಂಡ್ರೆ, ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ. ಪಕ್ಷ ನಡೆಸಿರುವ ಸಮೀಕ್ಷೆಗಳಲ್ಲಿ ತಮ್ಮ ಪುತ್ರ ಸಾಗರ್ ಖಂಡ್ರೆಗೆ ಮುನ್ನಡೆ ಸಾಧಿಸಿರುವ ಅಂಶವನ್ನು ವರಿಷ್ಠರ ಗಮನಕ್ಕೆ ತಂದು, ಟಿಕೆಟ್‌ ನೀಡುವಂತೆ ಖಂಡ್ರೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು