ಬೀದರ್

ಖಟಕಚಿಂಚೋಳಿ: ಸೌತೆಕಾಯಿ ಬೆಳೆದು ಯಶಸ್ಸು ಕಂಡ ರೈತ

ಖಟಕಚಿಂಚೋಳಿ: ನೆಲವಾಡ ಗ್ರಾಮದ ರೈತ ರಾಜಕುಮಾರ ತೊಗರೆ ತಮ್ಮ ಒಂದು ಎಕರೆಯಲ್ಲಿ ಸೌತೆಕಾಯಿ ಬೆಳೆದು ಯಶಸ್ಸು ಕಂಡಿದ್ದಾರೆ.

ಸದ್ಯ ಬೇಸಿಗೆ ಪ್ರಾರಂಭವಾಗಿದ್ದು, ತಂಪು ಪಾನೀಯ ಹಾಗೂ ಸೌತೆಕಾಯಿ ಬೇಡಿಕೆ ಹೆಚ್ಚಿದೆ. ‘ಸೌತೆಕಾಯಿ ಬೆಳೆಯಲು ಡಿಸೆಂಬರ್ ತಿಂಗಳಲ್ಲಿ ಭೂಮಿ ಹದ ಮಾಡಿ 5 ಅಡಿ ಅಂತರದಲ್ಲಿ ಸಾಲುಗಳನ್ನು ಬಿಡಲಾಗಿದೆ.

ಸಾಲುಗಳ ಮೇಲ್ಭಾಗದಲ್ಲಿ ಮಲ್ಚಿಂಗ್‌ ಪೇಪರ್‌ ಹಾಸಿ ಸಸಿಯಿಂದ ಸಸಿಗೆ ಒಂದೂವರೆ ಅಡಿ ಅಂತರದಲ್ಲಿ ಸೌತೆ ಬೀಜ ನಾಟಿ ಮಾಡಿದ್ದಾರೆ. ಅಲ್ಲದೇ ಹನಿ ನೀರಾವರಿ ಮೂಲಕ ನೀರು ಬಿಟ್ಟಿದ್ದೇನೆ’ ಎನ್ನುತ್ತಾರೆ ರೈತ ರಾಜಕುಮಾರ.

ಸೌತೆಕಾಯಿ ಎರಡು ತಿಂಗಳಲ್ಲಿ ಕಟಾವಿಗೆ ಬಂದಿದೆ. ಸೌತೆ ಬೆಳೆಯಲು ₹ 30 ಸಾವಿರ ಖರ್ಚಾಗಿದೆ. ಸದ್ಯ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ಸೌತೆಕಾಯಿ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರತಿದಿನ ಅಂದಾಜು 80 ಕೆಜಿ ಕಟಾವಿಗೆ ಬರುತ್ತಿದೆ. ಅದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹ 30 ರಿಂದ ₹ 40ಕ್ಕೆ ಮಾರಾಟವಾಗುತ್ತಿದೆ. ಇದರಿಂದ ಕಡಿಮೆ ಸಮಯದಲ್ಲಿ ಹೆಚ್ಚಿನ ಆದಾಯ ಲಭಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಸೌತೆಕಾಯಿ ಬೆಳೆ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುತ್ತದೆ. ಆದರೆ ಅದಕ್ಕೆ ತಕ್ಕಂತೆ ಪ್ರತಿದಿನ ಪರಿಶ್ರಮ ಪಡಬೇಕು. ಔಷಧ ಸಿಂಪಡಣೆ, ರಾಸಾಯನಿಕ ಗೊಬ್ಬರ, ಕಳೆ ತೆಗೆಯುವುದು ಸಮಯಕ್ಕೆ ಸರಿಯಾಗಿ ಮಾಡಿದರೆ ನಾಲ್ಕು ತಿಂಗಳವರೆಗೆ ಇಳುವರಿ ಪಡೆಯಬಹುದು ಎಂದು ತಮ್ಮ ಅನುಭವ ಹಂಚಿಕೊಂಡರು.

ನಾನು ಸೌತೆಕಾಯಿಯನ್ನು ಮಧ್ಯವರ್ತಿಗಳ ಮೂಲಕ ಮಾರಾಟ ಮಾಡುವುದಿಲ್ಲ. ಬದಲಾಗಿ ಸ್ವತಃ ನಾನೇ ಭಾಲ್ಕಿ, ಹಳ್ಳಿಖೇಡ, ಹುಮನಾಬಾದ್ ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತೇನೆ. ನನ್ನ ಸಮಕ್ಷಮದಲ್ಲಿ ಎಲ್ಲವೂ ನಡೆಯುತ್ತದೆ. ಇದರಿಂದ ತೂಕ, ಬೆಲೆಯಲ್ಲಿ ಯಾವುದೇ ರೀತಿಯ ಏರುಪೇರಾಗುವುದಿಲ್ಲ ಎನ್ನುತ್ತಾರೆ.

ಕೇವಲ ಪಿಯುಸಿ ಓದಿದರೂ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಬೇಕೆನ್ನುವ ಮಹದಾಸೆ ಇವರದ್ದಾಗಿದೆ. ಸದ್ಯ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ವಾತಾವರಣಕ್ಕೆ ಅನುಗುಣವಾಗಿ ಬೆಳೆ ಬೆಳೆದು ಯಶಸ್ಸು ಕಾಣುತ್ತಿದ್ದಾರೆ. ಅಲ್ಲದೇ ಈ ರೈತ ನಿರಂತರವಾಗಿ ಕೃಷಿ ವಿಜ್ಞಾನಿಗಳ ಸಲಹೆ ಪಡೆಯುತ್ತಾರೆ ಹಿರಿಯರಾದ ಅರುಣ ಹಜ್ಜರಗೆ ತಿಳಿಸುತ್ತಾರೆ.

Ashika S

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

5 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

22 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

50 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago