News Karnataka Kannada
Friday, May 03 2024
ಬೀದರ್

ಔರಾದ್‌: ಚುನಾವಣೆ ವೇಳೆ ಬರುವ ಅತಿಥಿ ಕಲಾವಿದರಿಗೆ ಟಿಕೇಟ್‌ ಬೇಡವೆಂಬ ಆಗ್ರಹ

Local non-local fight in Aurad taluka
Photo Credit : News Kannada

ಔರಾದ್‌ : ಸ್ಥಳೀಯರಿಗೆ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸುಧಾಕರ ಕೊಳ್ಳುರ ಹೇಳಿದ್ದಾರೆ.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ತಾಲೂಕಿನಲ್ಲಿ ಪಕ್ಷ ಸಂಘಟನೆ ಮಾಡಿದ ಸ್ಥಳೀಯರಿಗೆ ಔರಾದ್‌ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಬೇಕು ಅದನ್ನು ಬಿಟ್ಟು ಬೇರೆ ಮತಕ್ಷೇತ್ರದಿಂದ ಬಂದವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೇವಲ ಚುನಾವಣೆ ಗಾಗಿ ಕ್ಷೇತ್ರದಲ್ಲಿ ಓಡಾಡಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುತ್ತಿರುವವರಿಗೆ ಟಿಕೇಟ್ ನೀಡಬಾರದು. ಇವರು ಚುನಾವಣೆ ಗಾಗಿ ಮಾತ್ರ ತಾಲೂಕಿಗೆ ಬರುತ್ತಿದ್ದಾರೆ ಚುನಾವಣೆ ಮುಗಿದ ನಂತರ ಕ್ಷೇತ್ರದಲ್ಲಿ ಯಾವತ್ತೂ ತಿರುಗಿಯು ನೋಡುವುದಿಲ್ಲ.

ಪಕ್ಷ ಮೂರು ಬಾರಿಯೂ ಇದೇ ತರ ಬೇರೆ ಕಡೆಯಿಂದ ಬಂದವರಿಗೆ ಟಿಕೆಟ್ ನೀಡಿದೆ. ಚುನಾವಣೆಯಲ್ಲಿ ಸೋತ ನಂತರ ಕ್ಷೇತ್ರದ ಕಡೆ ಮುಖವು ಮಾಡಿ ನೋಡಿಲ್ಲ ಎಂದರು.

ನಾನು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 14 ವರ್ಷಗಳಿಂದ ಕಾರ್ಯಕರ್ತನಾಗಿ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿ ಪಕ್ಷ ಸಂಘಟನೆ ಮಾಡಿದ್ದೇನೆ. ಜೊತೆಗೆ ಸ್ಥಳೀಯ ಶಾಸಕರ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ, ದುರಾಡಳಿತದ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ಹಾಗಾಗಿ ನನಗೆ ಟಿಕೆಟ್ ನೀಡಬೇಕು ಇಲ್ಲವಾದರೆ ಸ್ಥಳೀಯವಾಗಿ ನಮಗಿಂತ ಹೆಚ್ಚಿನ ಪಕ್ಷ ಸಂಘಟನೆ ಯಲ್ಲಿ ತೊಡಗಿಕೊಂಡಿರುವ ಸ್ಥಳೀಯ ಮುಖಂಡರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದೆ ಇರುವವರನ್ನು, ಬೇರೆ ಮತಕ್ಷೇತ್ರದಿಂದ ಬಂದವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಸ್ಥಳೀಯ ಟಿಕೆಟ್ ಆಕಾಂಕ್ಷಿ ಸುಧಾಕರ ಕೊಳ್ಳುರ  ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು