News Karnataka Kannada
Thursday, May 02 2024
ಬೀದರ್

ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ: ಸಚಿವ ಪ್ರಭು ಚವ್ಹಾಣ

Make Vijay Sankalp Abhiyan a success
Photo Credit : News Kannada

ಔರಾದ : ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಜನವರಿ 23ರಂದು ಔರಾದ ತಾಲ್ಲೂಕಿನ ಗಡಿಕುಶನೂರ ಹಾಗೂ ಕಂದಗೂಳ ಗ್ರಾಮದಲ್ಲಿ ಬಿಜೆಪಿ ಔರಾದ(ಬಿ) ಘಟಕದಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿದರು.

ಕಾರ್ಯಕರ್ತರೊಂದಿಗೆ ಗ್ರಾಮದ ರಸ್ತೆಗಳಲ್ಲಿ ಸಂಚರಿಸಿದರು. ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸಿದರು. ಸ್ವತಃ ಕೈಯಲ್ಲಿ ಕುಂಚ ಹಿಡಿದು ಬಿಜೆಪಿಯೇ ಭರವಸೆ ಮತ್ತೊಮ್ಮೆ ಬಿಜೆಪಿ ಎಂಬ ಗೋಡೆ ಬರಹವನ್ನು ಬರೆದು ಗಮನ ಸೆಳೆದರು.
ಭಾರತೀಯ ಜನತಾ ಪಕ್ಷದ ವತಿಯಿಂದ ವತಿಯಿಂದ ರಾಜ್ಯಾದ್ಯಂತ ಜನವರಿ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದಲ್ಲಿ ಸದಸ್ಯರನ್ನು ನೋಂದಾಯಿಸಬೇಕು ಎಂದು ಹೇಳಿದರು.

ಎಲ್ಲ ಬೂತಗಳಲ್ಲಿ ಬಿಜೆಪಿಯೇ ಭರವಸೆ, ಮತ್ತೊಮ್ಮೆ ಬಿಜೆಪಿ ಈ ಘೋಷವಾಕ್ಯದೊಂದಿಗೆ ನಡೆಯಲಿರುವ ಈ ಅಭಿಯಾನದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಕಾರ್ಯಕರ್ತರಲ್ಲಿ ಕೋರಿದರು.

ಮಿಸ್ಡ್‌ ಕಾಲ್‌ ಕೊಡುವ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಮಾಡುವ ವಿಶಿಷ್ಟ ಅವಕಾಶವನ್ನು ನೀಡಲಾಗಿದೆ. ಅದರಂತೆ ತಮ್ಮ ಮೊಬೈಲ್ ನಿಂದ 8000090009 ಸಂಖ್ಯೆಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಜೆಪಿ ಔರಾದ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಸಂತ ಬಿರಾದಾರ, ರವೀಂದ್ರ ರೆಡ್ಡಿ, ಶಿವು ಪಾಂಚಾಳ, ಪ್ರಕಾಶ ಮೇತ್ರೆ, ಪ್ರಕಾಶ ಜೀರ್ಗೆ, ಲೋಕೇಶ, ನಾಗಶೆಟ್ಟಿ ಗಾದಗೆ, ಪ್ರದೀಪ, ಖಂಡೋಬಾ ಕಂಗಟೆ, ರಮೇಶ ಪಾಟೀಲ, ಯಶವಂತ ಪಾಟೀಲ, ಅನೀಲ ಮುಸ್ತಾಪೂರೆ, ವಿಸ್ತಾರಕ ಪ್ರಕಾಶ ಮಾನೆ ಹಾಗೂ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು