ಬೀದರ್: ಬಸವಕಲ್ಯಾಣ ನಗರದ, ಕಾಂಗ್ರೆಸ್ ಕಚೇರಿಯಲ್ಲಿ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸುದ್ದಿಗೋಷ್ಠಿ ನಡೆಸಿದ್ದರು.
ಇದೆ ಏಪ್ರಿಲ್ 12 ರಂದು ಬಸವಕಲ್ಯಾಣ ನಗರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ಧಾರೆ ಎಂದು ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಹಾಗೇ ಬೀದರ ನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಹೋದಲ್ಲೆಲ್ಲಾ ಜನಸಾಗರವೇ ಹರಿದು ಬರುತ್ತಿದೆ. ದೇಶದ ತುಂಬಾ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿವೆ.
ಕರ್ನಾಟಕದಲ್ಲಿ 15 ರಿಂದ 20 ಸೀಟು ಗಳನ್ನು ಗೆಲ್ಲಲ್ಲಿದ್ಧೆವೆ. ಅಬ್ ಕಿ ಬಾರ್ 400 ಪಾರ್ ಎಂದು ಬಿಜೆಪಿಗರು ಹೇಳುತ್ತಿದ್ದಾರೆ ಆದರೆ ಬಿಜೆಪಿಗರು 200 ಸೀಟು ಸಹ ಗೆಲ್ಲಲ್ಲು ಸಾಧ್ಯವಿಲ್ಲಾ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇಡಿ. ಐಟಿ. ಗಳನ್ನು ದುರುಪಯೋಗಪಡಿಸಿಕೊಂಡು ಬಂಧಿಸಲಾಗಿದೆ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಈಶ್ವರ ಖಂಡ್ರೆ ಕಿಡಿಕಾರಿದರು.
ಈ ಬಾರಿ ಜನ ಕೇಂದ್ರ ಸರ್ಕಾರದ ವಿರುದ್ಧ ರೋಸಿ ಹೋಗಿದ್ದಾರೆ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು. ಇದೆ ಏಪ್ರಿಲ್ 12 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತು ಅವರ ಜೊತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಗಮಿಸಲಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮ ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಕಾಲೇಜ ಆವರಣದಲ್ಲಿ ಸಾಯಂಕಾಲ 4 ಗಂಟೆ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೇಟ್ಟಿ, ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್, ಹಾಗೂ ಇತರರು ಉಪಸ್ಥಿತರಿದ್ದರು.