ಬಸವಕಲ್ಯಾಣ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಿಂದಾಗಿ ಬಿಗುವಿನ ವಾತಾವರಣ ಇರುವುದರಿಂದ ನಗರದಿಂದ ಅಲ್ಲಿನ ಸ್ಥಳಗಳಿಗೆ ಪ್ರಯಾಣಿಸುವ ಬಸ್ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರೂರಿ ಸಮೀಪ ಸೋಮವಾರ ಕರ್ನಾಟಕದ ಬಸ್ಗೆ ಬೆಂಕಿ ಹಚ್ಚಿದ್ದರಿಂದ ಬಸ್ ಸಂಚಾರ ನಿಲ್ಲಿಸಲಾಗಿದೆ.
ಮೇಲಾಧಿಕಾರಿಗಳ ಮುಂದಿನ ಆದೇಶದವರೆಗೆ ಬಸ್ ಸಂಚಾರ ಇರುವುದಿಲ್ಲ. ತುಳಜಾಪುರ ಹಾಗೂ ಇತರೆಡೆಯೂ ಹೋಗುವ ಬಸ್ ಗಳು ಹೋಗುವುದಿಲ್ಲ ಎಂದು ಬಸ್ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.