ಬೀದರ್

ತೆಲಂಗಾಣಾದಲ್ಲಿ ಶಾಸಕ ಪ್ರಭು ಚವ್ಹಾಣ ಪ್ರಚಾರ

ಬೀದರ್: ತೆಲಂಗಾಣಾ ರಾಜ್ಯದ ನೆಲಗೊಂಡ ಜಿಲ್ಲೆಯಲ್ಲಿರುವ ದೇವರಕೊಂಡ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕವಾಗಿರುವ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು  ದೇವರಕೊಂಡದಲ್ಲಿ ಪ್ರಚಾರ ನಡೆಸಿದರು.

ಮುಂಬರುವ ದಿನಗಳಲ್ಲಿ ತೆಲಂಗಾಣಾ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆಯ ನಿಮಿತ್ತ ಪಕ್ಷದ ಕಾರ್ಯಕ್ರಮ ಎಂ.ಎಲ್.ಎ ಪ್ರವಾಸ ಯೋಜನೆಯಡಿ ದಿಂಡಿ, ಸಿಂಗರಾಜಪಲ್ಲಿ, ಕೊಂಡಾಮಲ್ಲೆಪಲ್ಲಿ ಸೇರಿದಂತೆ ಹಲವೆಡೆ ಸಂಚರಿಸಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಸರಣಿ ಸಭೆಗಳನ್ನು ನಡೆಸಿದರು.

ಕಳೆದೊಂದು ವಾರದಿಂದ ದೇವರಕೊಂಡ ಕ್ಷೇತ್ರದ ಪ್ರವಾಸದಲ್ಲಿರುವ ಶಾಸಕರು, ವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ, ಗೋಡೆ ಬರಹ ಬರೆಯುವುದು, ಬಿತ್ತಿಪತ್ರಗಳನ್ನು ಅಂಟಿಸಿ ಗಮನ ಸೆಳೆದರು. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ದೇಶದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಕುರಿತ ಸಾಧನೆಗಳ ಕರಪತ್ರಗಳನ್ನು ವಿತರಿಸಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿ ಪರವಾದ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕೋರಿದರು.

ಮಂಡಲ, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳ ಸಭೆ ನಡೆಸಿ ವಿಧಾನಸಭಾ ಚುನಾವಣೆಯಲ್ಲಿ ಮಾಡಬೇಕಾದ ಕೆಲಸಗಳು, ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನತೆಯ ಎದುರು ಕೊಂಡೊಯ್ಯುವುದು ಮತ್ತು ಪಕ್ಷವನ್ನು ಗೆಲ್ಲಿಸಲು ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.

ಕ್ಷೇತ್ರದ ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆಗಳಂತೆ ರಾಜ್ಯವನ್ನು ಅಭಿವೃದ್ಧಿಪಡಿಸಲು ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು. ಈ ಮೂಲಕ ದೇವರಕೊಂಡ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಬದಲಾವಣೆಗೆ ಮುನ್ನುಡಿ ಬರೆಯಬೇಕಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಎಂಎಲ್ಎ ಪ್ರವಾಸ ಯೋಜನೆಯ ಸಂಚಾಲಕ ಎ.ಟಿ ಕೃಷ್ಣ ಪ್ರಮುಖರಾದ ಲಾಲು ನಾಯಕ್, ಕಲ್ಯಾಣ ನಾಯಕ್, ರಾಮಶೆಟ್ಟಿ ಪನ್ನಾಳೆ , ಕಿರಣ ಪಾಟೀಲ ಸೇರಿದಂತೆ ಇತರರಿದ್ದರು.

Ashika S

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

9 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

18 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

24 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

31 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

40 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

45 mins ago