News Karnataka Kannada
Friday, May 03 2024
ಬೀದರ್

ನಗರಸಭೆ ನೌಕರರಿಂದ ಕೆಲಸ ಬಹಿಷ್ಕರಿಸಿ ಧರಣಿ

ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ವೇತನ ನೇರ ಪಾವತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದವರು ನಗರದಲ್ಲಿ ಮಂಗಳವಾರ ಕೆಲಸ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
Photo Credit : News Kannada

ಬೀದರ್: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ವೇತನ ನೇರ ಪಾವತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದವರು ನಗರದಲ್ಲಿ ಮಂಗಳವಾರ ಕೆಲಸ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಸರ್ಕಾರ ಬೇಡಿಕೆ ಈಡೇರಿಸುವವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಘೋಷಣೆಗಳನ್ನು ಕೂಗಿದರು.

ಘನತ್ಯಾಜ್ಯ ನಿರ್ವಹಣೆಯ ಕೆಲಸ ಮಾಡುವ ವಾಹನ ಚಾಲಕರು, ನೈರ್ಮಲ್ಯ ಸೂಪರ್‌ವೈಸರ್‌ಗಳು, ಲೋಡರ್ಸ್‌, ಕ್ಲೀನರ್ಸ್‌, ಅಟೆಂಡರ್‌, ಆಪರೇಟರ್‌, ನೀರು ಸರಬರಾಜು ಸಹಾಯಕರು, ಬೀದಿ ದೀಪಗಳ ನಿರ್ವಹಣೆ ಮಾಡುವವರ ವೇತನ ನೇರ ಪಾವತಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬರಲಾಗಿದೆ. ಆದರೆ, ಸರ್ಕಾರ ಕಿವಿಗೊಟ್ಟಿಲ್ಲ. ಈಗ ಅನಿವಾರ್ಯವಾಗಿ ಧರಣಿ ನಡೆಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 600 ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಬೀದರ್‌ ನಗರವೊಂದರಲ್ಲೇ 163 ಕಾರ್ಮಿಕರಿದ್ದಾರೆ. ನಸುಕಿನ ಜಾವ 4 ಗಂಟೆಗೆ ಎದ್ದು ನಗರವನ್ನು ಸ್ವಚ್ಛಗೊಳಿಸುತ್ತೇವೆ. ಊರಿನ ಹೊಲಸು ವಿಲೇವಾರಿ ಮಾಡುತ್ತೇವೆ. ಆದರೆ, ನಮ್ಮ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ. ನಮ್ಮ ಬಗ್ಗೆ ನಿರ್ಲಕ್ಷ್ಯ ಧೋರಣೆ ಸರಿಯಲ್ಲ ಎಂದು ಗೋಳು ತೋಡಿಕೊಂಡರು.

ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷ ನಮ್ಮ ಬೇಡಿಕೆಗಳನ್ನು ಭರವಸೆ ನೀಡಿತ್ತು. ಈಗಾಗಲೇ ಕಾಯಂ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಾರುತಿ ಬಿ. ಕಂಟೆ, ಸಂಘದ ಪ್ರಮುಖರಾದ ಸಿದ್ರಾಮ ಪಾಟೀಲ, ರಮೇಶ ಪಾಸ್ವಾನ್‌, ಯೇಸುದಾಸ್‌, ರಾಜಕುಮಾರ ಮೊದಲಾದವರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು