News Karnataka Kannada
Thursday, May 09 2024
ಬೀದರ್

ಬೀದರ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ

HDK warns Congress of approaching JD(S) candidates to win
Photo Credit : Facebook

ಬೀದರ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಡುವಳಿಕೆಗಳನ್ನು ಗಮನಿಸಿದರೆ ಡಿಸೆಂಬರ್ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಚುನಾವಣಾ ಕಣಕ್ಕೆ ನಿಖಿಲ್ ಅವರನ್ನು ಇಳಿಸದೆ, 40 ಕ್ಷೇತ್ರಗಳಲ್ಲಿ ಪ್ರಚಾರದ ಜವಾಬ್ದಾರಿಯನ್ನು ಅವರಿಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಜನರಲ್ಲಿ ಮೂಡಿಸಲಾಗುತ್ತಿದೆ. ನನ್ನ ಮಹತ್ವಕಾಂಕ್ಷಿ ಯೋಜನೆಗೆ ಮೂರ‍್ನಾಲ್ಕು ಲಕ್ಷ ಕೋಟಿ ರೂ. ಅನುದಾನದ ಅಗತ್ಯವಿದೆ. ಎರಡು ಸರ್ಕಾರಗಳು ಬಜೆಟ್‌ ನಲ್ಲಿ ಈಗ ನೀಡುತ್ತಿರುವ ಅನುದಾನದಲ್ಲಿ ನೂರು ವರ್ಷ ಕಳೆದರು ನೀರಾವರಿ ಯೋಜನೆಗಳು ಪೂರ್ಣಗೊಳಿಸಲು ಸಾಧ್ಯವಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಸವಾಲನ್ನು ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

ರಾಜ್ಯಾದ್ಯಂತ ಜೆಡಿಎಸ್ ಹಮ್ಮಿಕೊಂಡಿರುವ ‘ಪಂಚರತ್ನ’ ರಥಯಾತ್ರೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ರೂಪರೇಷ ಸಿದ್ಧಗೊಳಿಸಲಾಗಿದೆ. ಎರಡು ಹಂತಗಳ ಮೂಲಕ ಒಟ್ಟು 104 ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಲಿದ್ದು, ದಿನಕ್ಕೆ ಒಂದು ಕ್ಷೇತ್ರದಲ್ಲಿ 14-15 ಸಭೆಗಳನ್ನು ಆಯೋಜನೆ ಮತ್ತು ಒಂದು ರಾತ್ರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿದ್ದಾಗ ರೈತರ ಸಾಲ ಮನ್ನಾದಿಂದ ಆಗಿರುವ ಅನುಭವ ನನಗಿದೆ. ಸಾಲ ಮನ್ನಾ ತಾತ್ಕಾಲಿಕ ಅಷ್ಟೇ. ಹಾಗಾಗಿ ಮತ್ತೆ ಅಧಿಕಾರಕ್ಕೆ ಬಂದರೇ ರೈತರು ಕೃಷಿ ಚಟುವಟಿಕೆಗಳಿಗಗಿ ಸಾಲ ಮಾಡಿಕೊಳ್ಳದಂತೆ ಯೋಜನೆಗಳನ್ನು ರೂಪಿಸಲು ಚಿಂತನೆ ಹೊಂದಿದ್ದೆನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು