News Karnataka Kannada
Sunday, May 12 2024
ಬೀದರ್

ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಟ್ಟರೇ ತಾನೇ ಡಿ.ಕೆ‌ ಶಿವಕುಮಾರ್ ಸಿಎಂ ಆಗೋದು: ಯತ್ನಾಳ್‌

No question of Bombay team leaving BJP: Yatnal
Photo Credit : News Kannada

ಬೀದರ್: ಬಾಂಬೆ ಟೀಮ್ ನ ಯಾರು ಸಹ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿಜೆಪಿಯಲ್ಲಿ ವಲಸಿಗರು ಮತ್ತು ನಾವು (ಮೂಲ ಜನರು) ಎಲ್ಲ ಒಂದೇ ಆಗಿದ್ದೇವೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದರು.

ಜಿಲ್ಲೆಯ ಹಳ್ಳಿಖೇಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ‌ ಬಿಜೆಪಿ ಸೇರಿ ನಮ್ಮ ಸರ್ಕಾರದಲ್ಲಿ ಅವರು ಮಂತ್ರಿಯಾಗಿದ್ದಾರೆ.

ಅವರಿಗಾಗಿ ನಾವು ಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ್ದೇವು. ಅವರಿಂದ ನಮಗೆ ಮತ್ತು ನಮ್ಮಿಂದ‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ, ಹಿಗಾಗಿ ಅವರು ಕಾಂಗ್ರೆಸ್ಸಿಗೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಇನ್ನೂ ಕಾಂಗ್ರೆಸ್ ನಲ್ಲಿ ಹೊಡೆದಾಟ ನಡೆಯುತ್ತಿರುವಾಗ ಅಲ್ಲಿಗೆ ಹೋಗಿ ಇವರೇನು ಮಾಡತ್ತಾರೆ ಎಂದರು.

ವರಿಷ್ಠರು ಅಳೆದು ತೂಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುತ್ತಿದ್ದಾರೆ. ಶ್ರಾವಣ ಮಾಸ ಮುಗಿಯುವ ಒಳಗಾಗಿ‌ ವಿಪಕ್ಷ ನಾಯಕನ ಆಯ್ಕೆ ಆಗಲಿದೆ. ನನ್ನನ್ನು ವಿರೋಧ ಪಕ್ಷ ನಾಯಕನಾಗಿ ಮಾಡಿದರೂ ಅಷ್ಟೇ, ಇಲ್ಲವಾದರೂ ಓಕೆ. ಪಕ್ಷದ ನಿರ್ಣಯಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಮತ್ತು ನಾನು ಸಹೋದರಂತೆ ಇದ್ದೇವೆ. ಮಧ್ಯ ನೀವು ಜಗಳ ಹಚ್ಚ ಬೇಡಿ ಎಂದು ಮಾಧ್ಯಮದವರ ವಿರುದ್ಧ ಗರಂ ಆದ ಯತ್ನಾಳ್, ಲೋಕಸಭೆ ಚುನಾವಣೆಗೆ ಮೋದಿ ವಿರುದ್ಧ ಯಾರು ಬೇಕಾದರೂ ನಿಲ್ಲಲಿ ನಮಗೆ ಭಯವಿಲ್ಲ. 2024 ಕ್ಕೆ ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ. ಆಗ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರು ಜೈಲಿನಲ್ಲಿ ಇರುತ್ತಾರೆ ಎಂದು ಭವಿಷ್ಯ ನುಡಿದರು.

ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಟ್ಟರೇ ತಾನೇ ಡಿ.ಕೆ‌ ಶಿವಕುಮಾರ್ ಅವರು ಸಿಎಂ ಆಗಲು ಸಾಧ್ಯ. ಆದರೆ, ಐದು ವರ್ಷ ಅವರು ಸಿಎಂ ಗಾದಿ ಬಿಡಲ್ಲ ಎಂದು ಬಸವನಗೌಡ ಯತ್ನಾಳ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು