News Karnataka Kannada
Sunday, April 28 2024
ಬೀದರ್

ಫೆ.17ರಂದು ಬಸವಣ್ಣನವರ ಮೂರ್ತಿಗೆ ಪೂಜೆ ಸಲ್ಲಿಸಿ: ಬಸವಲಿಂಗ ಪಟ್ಟದ್ದೇವರು

ರಾಜ್ಯ ಸರ್ಕಾರವು ಈಗಾಗಲೇ 'ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಣೆ ಮಾಡಿದೆ. ಹಾಗೆಯೇ ಫೆ. 17ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುತ್ತಿರುವುದು ಬಹಳ ಸಂತಸ ತಂದಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನುಡಿದರು.
Photo Credit : News Kannada

ಬೀದರ್: ರಾಜ್ಯ ಸರ್ಕಾರವು ಈಗಾಗಲೇ ‘ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಣೆ ಮಾಡಿದೆ. ಹಾಗೆಯೇ ಫೆ. 17ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುತ್ತಿರುವುದು ಬಹಳ ಸಂತಸ ತಂದಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನುಡಿದರು.

ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಂದು ಬೆಳಿಗ್ಗೆ ಜಿಲ್ಲೆಯ ಪ್ರತಿಯೊಂದು ಗ್ರಾಮಗಳ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಬೇಕು. ಅಲ್ಲದೇ ಪ್ರತಿಯೊಬ್ಬರೂ ಅಂದು ತಮ್ಮ ಮನೆಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಚನಗಳ ಪಠಣ ಮಾಡಬೇಕು’ ಎಂದು ಮನವಿ ಮಾಡಿದರು.

‘ಜಗತ್ತಿಗೆ ಸಮಾನತೆಯ ಸಂದೇಶ ಸಾರಿದವರು ಬಸವಣ್ಣನವರು. ಅಲ್ಲದೇ ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿವೆ’ ಎಂದರು.

ಅಕ್ಕ ಗಂಗಾಂಬಿಕೆ ಮಾತನಾಡಿ, ’12ನೇಯ ಶತಮಾನದಲ್ಲಿಯೇ ಬಸವಣ್ಣನವರು ಮಹಿಳೆಯರಿಗೆ ಸಮಾನತೆ ಕಲ್ಪಿಸಿಕೊಟ್ಟಿದ್ದರು. ಕಾಯಕ, ದಾಸೋಹವನ್ನು ಬೋಧಿಸಿದರು. 17ರಂದು ಎಲ್ಲರೂ ಹಬ್ಬದಂತೆ ಆಚರಿಸಬೇಕು’ ಎಂದು ತಿಳಿಸಿದರು.

ಗೋರ್ಟಾ ಲಿಂಗಾಯತ ಮಹಾಮಠದ ಪ್ರಭುದೇವರು, ಬಿ.ಜಿ. ಶೆಟಕಾರ, ಬಾಬು ವಾಲಿ, ಸೋಮಶೇಖರ ಪಾಟೀಲ, ಆನಂದ ದೇವಪ್ಪ, ಶರಣಪ್ಪ ಮಿಠಾರೆ, ಸುರೇಶ ಚನಶೆಟ್ಟಿ, ಶಿವಶಂಕರ ಟೋಕರೆ, ಗಣೇಶ ಬಿರಾದಾರ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು