News Karnataka Kannada
Monday, April 29 2024
ಬೀದರ್

ಬೀದರ್: ಹೋರಾಟಗಾರರಿಂದ ಅಧಿಕಾರಿಗೆ ದಿಗ್ಬಂಧನ

ಹಳೇ ಸ್ಮಶಾನ ಭೂಮಿ ಒತ್ತುವರಿ ತೆರವು ಹಾಗೂ ಹೊಸದಾಗಿ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ ಅವರಿಗೆ ಪ್ರತಿಭಟನಾಕಾರರು ಕೆಲಹೊತ್ತು ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
Photo Credit : News Kannada

ಔರಾದ್: ಹಳೇ ಸ್ಮಶಾನ ಭೂಮಿ ಒತ್ತುವರಿ ತೆರವು ಹಾಗೂ ಹೊಸದಾಗಿ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ ಅವರಿಗೆ ಪ್ರತಿಭಟನಾಕಾರರು ಕೆಲಹೊತ್ತು ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ಜತೆ ಮಾತನಾಡಲು ಸ್ಥಳಕ್ಕೆ ಆಗಮಿಸಿದ ಸ್ವಾಮಿದಾಸ ಅವರನ್ನು ಕೂಡಿಸಿ ‘ನಮ್ಮ ಸಮಸ್ಯೆ ಪರಿಹರಿಸುವ ತನಕ ನಿಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ. ನಾವು ಕಳೆದ 15 ದಿನಗಳಿಂದ ಇಲ್ಲಿ ಧರಣಿ ಕುಳಿತಿದ್ದೇವೆ. ಆದರೆ ನಮ್ಮ ಬೇಡಿಕೆಗೆ ಮಾತ್ರ ಸ್ಪಂದನೆ ಸಿಗುತ್ತಿಲ್ಲ. ಜಿಲ್ಲಾಧಿಕಾರಿ ಬಂದು ನಮ್ಮ ಸಮಸ್ಯೆ ಪರಿಹರಿಸುವ ತನಕ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ’ ಎಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.

ಪಿಎಸ್‍ಐ ಉಪೇಂದ್ರ ಪ್ರತಿಭಟನಾ ನಿರತರ ಮನವೊಲಿಸಿ ಪರಿಸ್ಥಿತಿ ಶಾಂತಗೊಳಿಸಿದರು. ನ್ಯಾಯಾಲಯದ ತಡೆಯಾಜ್ಞೆ ಇರುವ ಭೂಮಿ ಹೊರತುಪಡಿಸಿ ಉಳಿದ ಅತಿಕ್ರಮಣವಾದ ಸ್ಮಶಾನ ಭೂಮಿಯನ್ನು ನಿಯಮಾನುಸಾರ ಮಾ.13ರೊಳಗೆ ತೆರವುಗೊಳಿಸಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಶಾಂತರಾದರು.

ಸ್ಮಶಾನ ಭೂಮಿ ಅತಿಕ್ರಮಣ ತೆರವು ಮಾಡಿ, ಆ ಭೂಮಿಗೆ ತಂತಿ ಬೇಲಿ ಹಾಕಿ ಅಲ್ಲಿ ವಿದ್ಯುತ್ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ಜನಸಂಖ್ಯೆ ಜಾಸ್ತಿ ಆಗಿರುವುದರಿಂದ ಈಗಿರುವ ಸ್ಮಶಾನ ಭೂಮಿ ಸಾಕಾಗುತ್ತಿಲ್ಲ. ಹೀಗಾಗಿ ಊರ ಹೊರಗೆ 10 ಎಕರೆ ಜಮೀನು ನೀಡಬೇಕು ಎಂಬುದು ತಮ್ಮ ಪ್ರಮುಖ ಬೇಡಿಕೆ. ಈ ಬೇಡಿಕೆ ಈಡೇರುವ ತನಕ ಧರಣಿ ಮುಂದುವರಿಯಲಿದೆ’ ಎಂದು ಪ್ರತಿಭಟನಾ ನಿರತ ಶರಣಪ್ಪ ಪಾಟೀಲ, ಅನೀಲ ಬೇಲೂರೆ, ಶಂಕು ನಿಸ್ಪತೆ, ಮಹೇಶ ಸ್ವಾಮಿ, ರಜನಿ ದಾಮಾ, ಅಮಿತ ಶಿವಪೂಜೆ ಇತರರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು