News Karnataka Kannada
Monday, April 29 2024
ಬೀದರ್

ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ: ಅರವಿಂದಕುಮಾರ ಅರಳಿ

ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹೇಳಿದರು.
Photo Credit : News Kannada

ಬೀದರ್: ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹೇಳಿದರು.

ಅವರು ಶುಕ್ರವಾರ ಬೀದರ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಚಾರದ ಸಂಚಾರಿ ವಾಹನಕ್ಮೆ ಹಸಿರು ನಿಶಾನೆ ತೋರಿ ಮಾತನಾಡಿದರು.

ಗೃಹ ಜ್ಯೋತಿ. ಗೃಹ ಲಕ್ಷಿ. ಮತ್ತು ಶಕ್ತಿ ಯೋಜನೆಗಳಿಂದ ವಿಶೇಷವಾಗಿ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ರಾಜ್ಯದಲ್ಲಿ ಯಾರು ಹಸಿವಿನಿಂದ ಬಳಲಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಮಾಡಲಾಗಿದೆ ಹಾಗೂ ಪದವಿ ಮತ್ತು ಡಿಪ್ಲೋಮಾ ಮುಗಿಸಿ ಉದ್ಯೋಗ ಸಿಗದ ನಿರುದ್ಯೋಗ ಪದವಿಧರ ಯುವಕ ಮತ್ತು ಯುವತಿಯರಿಗೆ ನಿರುದ್ಯೋಗ ಭತ್ಯಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದರು.

ಸಾರ್ವಜನಿಕರು ಸರ್ಕಾರದ ಎಲ್ಲಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ಈ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಸಲುವಾಗಿ ಪ್ರಚಾರ ವಾಹನ ಮತ್ತು ಕಲಾ ತಂಡಗಳ ಮೂಲಕ ಗ್ರಾಮೀಣ ಜನರಿಗೆ ಈ ಯೋಜನೆಗಳ ಮಾಹಿತಿಯನ್ನು ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂಚಾರಿ ವಾಹನ ಬೀದರ ಜಿಲ್ಲೆಯಲ್ಲಿ ಸರ್ಕಾರದ 5 ಯೋಜನೆಗಳಾದ ಶಕ್ತಿ. ಗೃಹಜ್ಯೋತಿ. ಅನ್ನಭಾಗ್ಯ. ಗೃಹ ಲಕ್ಷ್ಮಿ. ಯುವ ನಿಧಿ ಯೋಜನೆಗಳ ಕುರಿತು ಪ್ರಚಾರ ನೀಡಲಿದೆ ಇದರ ಜೊತೆಗೆ ಒಂದು ಕಲಾ ತಂಡವು ಇರಲಿದ್ದು ಈ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಬೀದರ ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್, ಮುಖಂಡರಾದ ಬಬಲು ಪಾಲ, ಮಾಹಾಲಿಂಗ, ವಾರ್ತಾ ಇಲಾಖೆಯ ವಿಜಯಕೃಷ್ಣ ಸೋಲಪುರ, ಕಲಾವಿದರಾದ ಶಂಕರ ಚೋಂಡಿ ಮತ್ತು ತಂಡ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು