ಬೀದರ್: ತಲೆನೋವಿನಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಕೀರ್ತಿ ರಾಮು (22) ಮೃತ ಗರ್ಭಿಣಿ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮಾಣಿಕ್ ನಗರದಲ್ಲಿ ಈ ಘಟನೆ ನಡೆದಿದೆ. ಕೀರ್ತಿರಾಮು 7 ತಿಂಗಳ ಗರ್ಭಿಣಿಯಾಗಿದ್ದು, ಹಲವು ತಿಂಗಳುಗಳಿಂದ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಷ್ಟೇ ಚಿಕಿತ್ಸೆ ಮಾಡಿದರೂ ಗುಣವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಕೀರ್ತಿರಾಮು ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾವಿಗೆ ಬಿದ್ದ ಗರ್ಭಿಣಿಯ ಮೃತದೇಹವನ್ನು ಪೊಲೀಸರು ಮೇಲೆಕ್ಕಿತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.