ಬೀದರ್: ಹುಡುಗಿ ಗ್ರಾಮದ ಶಿವಾರದ ಠಾಕೂರ ಧಾಬಾ ಹಿಂದುಗಡೆ ಮೌನೇಶ್ವರ ಮಂದಿರ ಹತ್ತಿರ ಇರುವ ಠಾಕೂರ ಅವರ ಒಂದು ಶೆಡ್ಡಿನಲ್ಲಿ ಅನಧಿಕೃತವಾಗಿ ಬ್ಯಾರಲ್ ಮತ್ತು 3 ಟ್ಯಾಂಕರ್ ಲಾರಿಗಳಲ್ಲಿ ಮಾನವ ಜೀವಕ್ಕೆ ಹಾನಿಯಾಗುವಂತಹ ಕೆಮಿಕಲ್ ಸಂಗ್ರಹಿಸಿದ್ದು, ಮೇ 24 ರಂದು ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ.
ಬೀದರ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ ಹಾಗೂ ಹುಮನಾಬಾದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಸದರಿ ದಾಳಿಯಲ್ಲಿ ಆರೋಪಿತರ 3 ಕೆಮಿಕಲ್ ತುಂಬಿರುವ ಟ್ಯಾಂಕರುಗಳು, 43 ಕೆಮಿಕಲ್ ತುಂಬಿರುವ ಬ್ಯಾರಲ್ ಸೇರಿದಂಎ ಒಟ್ಟು 81 ಟನ್ 6 ಕ್ವಿಂಟಾಲ್ ಕೆಮಿಕಲ್ನ್ನು ಅದರ ಅಂದಾಜು 8759324 ರೂಪಾಯಿ ಬೆಳೆಬಾಳುವ ಕೆಮಿಕಲ್ ಹಾಗೂ ಲಾರಿಗಳನ್ನು ಜಪ್ತಿ ಪಡಿಸಿಕೊಂಡು ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.