News Karnataka Kannada
Monday, May 06 2024
ಬೀದರ್

ಗಡಿಭಾಗದಲ್ಲಿ ಕನ್ನಡ ಭವನ ನಿರ್ಮಿಸಲು ಮನವಿ

Request for construction of Kannada Bhavan in border areas
Photo Credit : News Kannada

ಹುಲಸೂರ: ತಾಲ್ಲೂಕಿನಲ್ಲಿ ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗಾಗಿ ಅನುಕೂಲ ಕಲ್ಪಿಸಲು ಕನ್ನಡ ಭವನ ನಿರ್ಮಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕ ಮನವಿ ಮಾಡಿದೆ.

ಪಟ್ಟಣದಲ್ಲಿ ಈ ಕುರಿತು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹಾವಣ್ಣ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜೀವಕುಮಾರ ಭೂಸಾರೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೀಪ ಬಿರಾದಾರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

‘ಕನ್ನಡ ಭವನಕ್ಕಾಗಿ ಒಂದು ನಿವೇಶನ ಮಂಜೂರು ಮಾಡಿ, ಕನ್ನಡ ಭಾಷೆಯ ಬೆಳವಣಿಗೆ ಜೊತೆಗೆ ಕನ್ನಡದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯಕ್ಕೆ ಸಹಕರಿಸಬೇಕು’ ಎಂದು ನಾಗರಾಜ ಹಾವಣ್ಣ ಕೋರಿದರು.

ಮನವಿ ಸ್ವೀಕರಿಸಿದ ಗ್ರಾ.ಪಂ ಅಧ್ಯಕ್ಷ ಸಂಜೀವಕುಮಾರ ಭೂಸಾರೆ ‘ಆದಷ್ಟು ಬೇಗ ಕನ್ನಡ ಭವನಕ್ಕಾಗಿ ನಿವೇಶನವನ್ನು ಮಂಜೂರಾತಿ ನೀಡಲಾಗುವುದು’ ಎಂದು ತಿಳಿಸಿದರು.

ಕಸಾಪ ತಾಲ್ಲೂಕು ಉಪಾಧ್ಯಕ್ಷ ಬಸವಕುಮಾರ ಕವಟೆ, ಗೌರವ ಕಾರ್ಯದರ್ಶಿ ಬಸವರಾಜ ಪಾಟೀಲ, ಯುವ ಘಟಕದ ಅಧ್ಯಕ್ಷ ನಾಗೇಶ್ ಮೇತ್ರೆ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ದೇವಪ್ಪ, ವಲಯ ಘಟಕದ ಅಧ್ಯಕ್ಷ ದೀಪಕ ಪಾಟೀಲ, ಡಾ.ಧರ್ಮೇಂದ್ರ ಭೋಸ್ಲೆ, ಗುಲಾಂ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು