News Karnataka Kannada
Saturday, May 18 2024
ಬೀದರ್

ಬೀದರ್ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ : ಸಾಗರ್ ಖಂಡ್ರೆ ಮನವಿ

'ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ ಕಳಿಸಿ ದಾಖಲೆ ನಿರ್ಮಿಸಿ' ಎಂದು ಬೀದರ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಈಶ್ವರ ಖಂಡ್ರೆ ಮನವಿ ಮಾಡಿದರು.
Photo Credit : NewsKarnataka

ಬೀದರ್  :  ‘ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ ಕಳಿಸಿ ದಾಖಲೆ ನಿರ್ಮಿಸಿ’ ಎಂದು ಬೀದರ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಈಶ್ವರ ಖಂಡ್ರೆ ಮನವಿ ಮಾಡಿದರು.

ತಾಲ್ಲೂಕಿನ ಗೋಟೂರ ಮತ್ತು ಕೊಡದೂರ ಗ್ರಾಮದಲ್ಲಿ ಶುಕ್ರವಾರ ಮತಯಾಚನೆ ಮಾಡಿ ಮಾತನಾಡಿದ ಅವರು ‘ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಲ್ಲೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ’ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿ ‘ಕಾಂಗ್ರೆಸ್ ಸರ್ವ ಜನಾಂಗದ ಏಳಿಗೆ ಬಯಸುವ ಪಕ್ಷವಾಗಿದೆ. ಸಾಗರ್ ಖಂಡ್ರೆ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ತಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸಬೇಕು’ ಎಂದು ಮನವಿ ಮಾಡಿದರು.

ಅರಣಕಲ್ ಜಿ.ಪಂ ಮಾಜಿ ಸದಸ್ಯ ರಾಜೇಶ ಗುತ್ತೇದಾರ ಮಾತನಾಡಿದರು.

ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವಿಂದ್ರಪ್ಪ ಹೆಬ್ಬಾಳ, ಯುವ ಘಟಕದ ಅಧ್ಯಕ್ಷ ಶರಣು ಮಜ್ಜಗಿ, ವಕ್ತಾರ ಶರಣು ಪಾಟೀಲ ಮೋತಕಪಳ್ಳಿ, ರಾಘವೇಂದ್ರ ಗುತ್ತೇದಾರ, ವೇದಪ್ರಕಾಶ ಮೋಟಗಿ, ಗಣಪತಿ ಹಾಳಕಾಯಿ, ಪ್ರಶಾಂತ ರಾಜಾಪುರ, ಸೂರ್ಯಕಾಂತ ಕಲ್ಲೂರ, ಮಲ್ಲಪ್ಪ ದಿಗ್ಗಾಂವ, ಬಂಡು ಗದ್ದಿ, ಅವಿನಾಶ ಮೂಲಿಮನಿ, ಮಡಿವಾಳಪ್ಪ ಗುಂಡಗುರ್ತಿ, ಪ್ರಕಾಶ ಮೇಲಕೇರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು