ಬೀದರ್ : ‘ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ ಕಳಿಸಿ ದಾಖಲೆ ನಿರ್ಮಿಸಿ’ ಎಂದು ಬೀದರ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಈಶ್ವರ ಖಂಡ್ರೆ ಮನವಿ ಮಾಡಿದರು.
ತಾಲ್ಲೂಕಿನ ಗೋಟೂರ ಮತ್ತು ಕೊಡದೂರ ಗ್ರಾಮದಲ್ಲಿ ಶುಕ್ರವಾರ ಮತಯಾಚನೆ ಮಾಡಿ ಮಾತನಾಡಿದ ಅವರು ‘ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಲ್ಲೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ’ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿ ‘ಕಾಂಗ್ರೆಸ್ ಸರ್ವ ಜನಾಂಗದ ಏಳಿಗೆ ಬಯಸುವ ಪಕ್ಷವಾಗಿದೆ. ಸಾಗರ್ ಖಂಡ್ರೆ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ತಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸಬೇಕು’ ಎಂದು ಮನವಿ ಮಾಡಿದರು.
ಅರಣಕಲ್ ಜಿ.ಪಂ ಮಾಜಿ ಸದಸ್ಯ ರಾಜೇಶ ಗುತ್ತೇದಾರ ಮಾತನಾಡಿದರು.
ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವಿಂದ್ರಪ್ಪ ಹೆಬ್ಬಾಳ, ಯುವ ಘಟಕದ ಅಧ್ಯಕ್ಷ ಶರಣು ಮಜ್ಜಗಿ, ವಕ್ತಾರ ಶರಣು ಪಾಟೀಲ ಮೋತಕಪಳ್ಳಿ, ರಾಘವೇಂದ್ರ ಗುತ್ತೇದಾರ, ವೇದಪ್ರಕಾಶ ಮೋಟಗಿ, ಗಣಪತಿ ಹಾಳಕಾಯಿ, ಪ್ರಶಾಂತ ರಾಜಾಪುರ, ಸೂರ್ಯಕಾಂತ ಕಲ್ಲೂರ, ಮಲ್ಲಪ್ಪ ದಿಗ್ಗಾಂವ, ಬಂಡು ಗದ್ದಿ, ಅವಿನಾಶ ಮೂಲಿಮನಿ, ಮಡಿವಾಳಪ್ಪ ಗುಂಡಗುರ್ತಿ, ಪ್ರಕಾಶ ಮೇಲಕೇರಿ ಉಪಸ್ಥಿತರಿದ್ದರು.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.