News Karnataka Kannada
Sunday, April 28 2024
ಬೀದರ್

ಬೀದರ್: ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಪಾಠ ಬೋಧನೆ

ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.
Photo Credit : News Kannada

ಹುಮನಾಬಾದ್‌: ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.

ಶಾಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಕಲಿಕೆಗೆ ಅವಕಾಶವಿದ್ದು, 16 ಮಕ್ಕಳು ಪ್ರವೇಶಾತಿ ಪಡೆದಿದ್ದಾರೆ. ಶಾಲೆಯಲ್ಲಿ ಒಬ್ಬರು ಮುಖ್ಯಶಿಕ್ಷಕ ಹಾಗೂ ಒಬ್ಬರು ಸಹ ಶಿಕ್ಷಕ ಇದ್ದಾರೆ.

ಶಾಲೆಯ ಒಂದು ಕೊಠಡಿಯ ಸಿಮೆಂಟ್, ಕಬ್ಬಿಣದ ಸಲಾಕೆಗಳು ಕಳಚಿ ಬೀಳುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ಗ್ರಾಮದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪಾಠ ಮಾಡುವ ವ್ಯವಸ್ಥೆ ಮಾಡಿದ್ದಾರೆ.

ಶಾಲೆಯಲ್ಲಿ ಎರಡು ಕೊಠಡಿಗಳಿದ್ದು, ಕಟ್ಟಡ ಶಿಥಿಲಗೊಂಡು ಹಲವು ವರ್ಷಗಳೇ ಕಳೆದಿವೆ. ಶಾಲೆಗೆ ಕೌಂಪೌಡ್‌ ಕೂಡ ಸಂಪೂರ್ಣ ಹಾಳಾಗಿದೆ. ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲ.

ಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಶಿಕ್ಷಣ ಇಲಾಖೆಗೆ, ಜಿಲ್ಲಾಧಿಕಾರಿಗೆ ಶಾಲೆ ಕಟ್ಟಡ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಚೆಗೆ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ದೂರು. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಶಾಲೆಯನ್ನು ಸಂಪೂರ್ಣ ಕೆಡವಿ ನೂತನ ಕಟ್ಟಡ ನಿರ್ಮಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮನೆ ಮುಂದೆಯೇ ಚರಂಡಿ ನೀರು: ಬೋತಗಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಕೊಳಚೆ ನೀರು ಸಂಗ್ರಹವಾಗುತ್ತಿದೆ. ಸ್ವಚ್ಛತೆಯ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವಂತಾಗಿದೆ.

ಗ್ರಾಮದಲ್ಲಿ ಈವರೆಗೂ ಸೂಕ್ತ ಚರಂಡಿ ನಿರ್ಮಾಣ ಆಗಿಲ್ಲ. ಚರಂಡಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕೊಳಚೆ ನೀರು ರಸ್ತೆ ಮೇಲೆಯೇ ಹರಿದು, ಅಲ್ಲಲ್ಲಿ ಸಂಗ್ರಹಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿವೆ. ಸೊಳ್ಳೆಗಳಿಂದಾಗಿ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಶೀಘ್ರದಲ್ಲೇ ಚರಂಡಿಗಳಲ್ಲಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿ ಬಹುತೇಕರು ಸ್ವಚ್ಛಗ್ರಾಮ ಯೋಜನೆ ಅಡಿ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಆದರೂ ಅವುಗಳನ್ನು ಬಳಸದೇ ಬಯಲು ಬಹಿರ್ದೆಸೆಗೆ ತೆರಳುತ್ತಾರೆ. ಹೀಗಾಗಿ ಶೌಚಾಲಯ ಬಳಕೆ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಖಲೀಲ್ ಒತ್ತಾಯಿಸಿದ್ದಾರೆ.

ಚರಂಡಿ ಸ್ವಚ್ಛತೆ ಮಾಡಿಸಲಾಗುವುದು. ಶೌಚಾಲಯ ಬಳಕೆಯ ಕುರಿತು ಗ್ರಾಮದಲ್ಲಿ ಅರಿವು ಮೂಡಿಸಲಾಗುವುದು’ ಎಂದು ಪಿಡಿಒ ರಮೇಶ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು