News Karnataka Kannada
Saturday, May 04 2024
ಬೀದರ್

ಪ್ರಚೋದನಕಾರಿ ಭಾಷಣ : ವಿರೂಪಾಕ್ಷ ಗಾದಗಿ, ಶಶಿಧರ ಹೊಸಳ್ಳಿ ಬಂಧನ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ ಗಾದಗಿ ಅವರನ್ನು ಬಂಧಿಸಲಾಗಿದೆ.
Photo Credit : NewsKarnataka

ಬೀದರ್ : ‘ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ ಗಾದಗಿ ಅವರನ್ನು ಬಂಧಿಸಲಾಗಿದೆ.

ನಗರದ ಬಸವೇಶ್ವರ ವೃತ್ತದ ಬಳಿ ಕಾಲೇಜು ವಿದ್ಯಾರ್ಥಿಗಳು, ಹಿಂದೂ ಪರ ಮುಖಂಡರು ಸೇರಿದ ಬಹಿರಂಗ ಸಭೆಯಲ್ಲಿ ಮಾತನಾಡಿದ ಮುಖಂಡ ವಿರೂಪಾಕ್ಷ ಗಾದಗಿ ನೇಹಾ ಹಿರೇಮಠ ಹತ್ಯೆ ಬಗ್ಗೆ ಗೃಹ ಸಚಿವ ಪರಮೇಶ್ವರ ಮಗ ನೀಡಿರುವ ಹೇಳಿಕೆಯನ್ನು ಖಂಡಿಸಿ ಪರಮೇಶ್ವರ ಮಗ ಹಿಜಡಾ ಆಗಿದ್ದಾನೆ.ನಿನ್ನ ಹೆಂಡತಿಗೆ ಶಿವಾಜಿ ನಗರದಲ್ಲಿ ಲವ್ ಆಗಿರಬಹುದು ಸೇರಿದಂತೆ ಇನ್ನಿತರ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ಪೌರಾಡಳಿತ ಸಚಿವ ರಹೀಂ ಖಾನ್ ಒಬ್ಬ ನಾಲಾಯಕ್, ಬುದ್ಧಿಗೇಡಿ, ಮೂರ್ಖನಾಗಿದ್ದಾನೆ ಎಂದಿದ್ದಾರೆ. ಇನ್ನೂ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಓದುವ ಹೆಣ್ಣು ಮಕ್ಕಳು ಡಾಕ್ಟರ್ ಆಗಬಹುದು ಆದರೆ ಹಿಂದೂ ಹೆಣ್ಣು ಆಗಿ ಉಳಿಯುವುದಿಲ್ಲ’ ಎಂದು ತಿಳಿಸಿದ್ದಾರೆ.

ಈ ರೀತಿ ಸಮಾಜದಲ್ಲಿ ಸಮುದಾಯಗಳ ನಡುವೆ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಸಮುದಾಯಗಳ ನಡುವೆ ಕೋಮು ಸೌಹಾರ್ದ ಉಂಟುಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಧನರಾಜ ಹಂಗರಗಿ, ವಿನೋದಕುಮಾರ ಅಪ್ಪೆ, ಪ್ರಶಾಂತ ದಶರಥ ದೊಡ್ಡಿ, ಹಣಮಂತ ಮಲ್ಕಾಪುರೆ ಇವರು ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು