News Karnataka Kannada
Monday, April 29 2024
ಬೀದರ್

ಶಿಕ್ಷಕರ ಕೊರತೆ: ಗ್ರಾಮ ಪಂಚಾಯತ್ ಮುಂದೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

Shortage of teachers: Students protest in front of village
Photo Credit : News Kannada

ಔರಾದ: ಶಿಕ್ಷಕರ ಕೊರತೆ ನೀಗಿಸುವಂತೆ ವಿದ್ಯಾರ್ಥಿಗಳು ತರಗತಿ ತೊರೆದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗ ಕುಳಿತು ಪ್ರತಿಭಟಿಸಿದ ಘಟನೆ ಔರಾದ ತಾಲೂಕಿನಲ್ಲಿ ಜರುಗಿದೆ.

ತಾಲೂಕಿನ ಗಡಿ ಗ್ರಾಮ ಜಮಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ 15 ದಿನಗಳಿಂದ ನಾಲ್ಕು ವಿಷಯಗಳ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ದಿನ ದೂಡುತ್ತಿದ್ದಾರೆ. ಶಾಲೆಯ ನಾಲ್ಕು ಶಿಕ್ಷಕರು ವರ್ಗಾವಣೆಯಾಗಿದ್ದಾರೆ. ಆದರೂ ಬೇರೆ ಶಿಕ್ಷಕರು ಇನ್ನೂ ಬಂದಿಲ್ಲ. ಶಿಕ್ಷಕರಿಲ್ಲದೇ ಬೇಸತ್ತು ವಿದ್ಯಾರ್ಥಿಗಳು ಪಂಚಾಯತ್ ಕಛೇರಿ ಮುಂದೆ ಕೆಲಕಾಲ ಧರಣಿ ನಡೆಸಿ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿದರು.

ಜಮಗಿ ಪ್ರೌಢ ಶಾಲೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದೇವೆ. ಆದರೆ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿ ಗಣಿತ ವಿಷಯ ಶಿಕ್ಷಕರೊಬ್ಬರೇ ಇದ್ದಾರೆ. ಉಳಿದ ಯಾವುದೇ ವಿಷಯಗಳ ಶಿಕ್ಷಕರಿಲ್ಲ. ಕಳೆದ ಹದಿನೈದು ದಿನಗಳಿಂದ ಬೇರೆ ಶಿಕ್ಷಕರು ಬರ್ತಾರೆ ಅಂತ ಹೇಳ್ತಾನೇ ಇದ್ದಾರೆ.‌ ಇದರಿಂದ ನಾವು ಶೈಕ್ಷಣಿಕ ಹಿನ್ನಡೆ ಅನುಭವಿಸುವಂತಾಗಿದೆ. ಸ್ಥಳೀಯ ಶಾಲಾ ಜವಾಬ್ದಾರಿ ನಿರ್ವಹಿಸುವ ಗ್ರಾಮ ಪಂಚಾಯತ್ ಆಡಳಿತ ಕೂಡಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು