ಬೀದರ್

ಹುಮನಾಬಾದ್: ‘ ಬಿಎಸ್ಎಸ್‌ಕೆ ಕಾರ್ಖಾನೆಗೆ ಬೀಗ ಹಾಕಿಸಿದ್ದೆ ಸಾಧನೆ ‘

ಹುಮನಾಬಾದ್: ಹುಮನಾಬಾದ್ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅವರ ಕೊಡುಗೆ ಏನಿದೆ. ಕೇವಲ ಗ್ರಾಮಗಳಲ್ಲಿ ವಿಶ್ರಾಂತಿ ಪಡೆಯಲು ಎರಡು ಬೆಂಚ್ ಹಾಕಿದ್ದಾರೆಯಷ್ಟೇ ಎಂದು ಶಾಸಕ ರಾಜಶೇಖರ ಪಾಟೀಲ ಬಿಜೆಪಿ ನಾಯಕರ ವಿರುದ್ಧ ಲೇವಡಿ ಮಾಡಿದರು.

ತಾಲ್ಲೂಕಿನ ಕಲ್ಲೂರ್, ಬೋರಂಪಳ್ಳಿ,ಕಠಳ್ಳಿ, ಚಿತ್ತಕೋಟ ಹಳ್ಳಿಖೇಡ್ ಕೆ. ಹಳ್ಳಿಖೇಡ್ ವಾಡಿ, ಮುಸ್ತಾಪುರ್ ಗ್ರಾಮಗಳಲ್ಲಿ ಸೋಮ ವಾರ ಕಾಂಗ್ರೆಸ್ ಗ್ಯಾರಂಟಿ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

‘ಸುಭಾಷ್ ಕಲ್ಲೂರ್ ಅವರು ಬಿಎಸ್‌ಎಸ್‌ಕೆ ಅಧ್ಯಕ್ಷರಾಗಿ ಕಾರ್ಖಾನೆಗೆ ದೊಡ್ಡದೊಂದು ಬೀಗ ಹಾಕಿದ್ದಾರೆ ಹೊರತು ಏನು ಅಭಿವೃದ್ಧಿ ಮಾಡಿಲ್ಲ. ಕ್ಷೇತ್ರದ ರೈತರ ಪರವಾಗಿ ಪಕ್ಷಾಬೇಧ ಮರೆತು ಕಾರ್ಖಾನೆಗೆ ₹10 ಕೋಟಿ ಅನುದಾನ ತರುವಲ್ಲಿ ನಾನು ಸುಭಾಷ್ ಕಲ್ಲೂರ್ ಅವರಿಗೆ ಸಹಕರಿಸಿದ್ದೇನೆ. ಆದರೆ ಅವರು ಒಂದು ಬಾರಿಯೂ ನನ್ನ ಹೆಸರು ಪ್ರಸ್ತಾಪ ಮಾಡಲಿಲ್ಲ. ಎಂದು ಬೇಸರ ವ್ಯಕ್ತಪಡಿಸಿದರು.

ಸುಭಾಷ್ ಅವರ ತಮ್ಮ ಸ್ವಂತ ಗ್ರಾಮವಾದ ಕಲ್ಲೂರಿಗೆ ಅವರ ಅಭಿವೃದ್ಧಿ ಕೊಡುಗೆ ಶೂನ್ಯ. ಕಲ್ಲೂರ್ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ 10 ಕೆ.ಜೆ. ಅಕ್ಕಿ, 200 ಯೂನಿಟ್ ವಿದ್ಯುತ್ ಸೌಲಭ್ಯ, ಮನೆಯ ಮಹಿಳೆಗೆ ₹2000 ನೀಡಲಾಗುವುದು. ಹೀಗಾಗಿ ನಿಮ್ಮ ಮತ ಕಾಂಗ್ರೆಸ್ ಪಕ್ಷಕ್ಕೆ ಹಾಕಿ ಎಂದು‌ ಸಾರ್ವಜನಿಕರಲ್ಲಿ ಮನ ಮನವಿ ಮಾಡಿದರು.

ಕಲ್ಲೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಿಯಾಂಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಣ್ಣ ಪಾಟೀಲ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ, ಅಫ್ಸರ್ ಮಿಯ್ಯಾ, ಅರುಣ್ ಕುರ್ಣೆ, ಉಮೇಶ್ ಜಮಗಿ, ಶಿವರಾಜಪ್ಪ ಪಾಟೀಲ, ಬಸವರಾಜ ಪಾಟೀಲ, ಅನೀಲ ದೊಡ್ಡಿ , ಜಗನಾಥ ಇದ್ದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

6 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

6 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago