News Karnataka Kannada
Sunday, April 28 2024
ಬೀದರ್

ಕ್ರೀಡೆ ಮಾನಸೀಕ ಸದೃಡತೆಗೆ ಸಹಕಾರಿ: ಭಗವಂತ ಖೂಬಾ

Sports helps in mental strength: Lord Khuba
Photo Credit : News Kannada

ಬೀದರ: ಮಕ್ಕಳಲ್ಲಿ ಓದಿನ ಜೋತೆಗೆ ಕ್ರೀಡಾ ಮನೋಭಾವ ಬೇಳೆಸುವ ಉದ್ದೇಶದಿಂದ ಸಂಸದರ ಕ್ರೀಡಾ ಮಹಾಮೇಳವನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ, ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಹೇಳಿದರು.

ಅವರು ರವಿವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಜಿಲ್ಲಾ ಮಟ್ಟದ ಸಂಸದರ ಕ್ರೀಡಾ ಮಹಾಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ವಲಯ ಮಟ್ಟದಿಂದ ವಿಜೇತರಾದ 3600 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮಹಾಮೇಳದಲ್ಲಿ ಭಾಗವಹಿಸಿದ್ದಾರೆ ಹಾಗೂ ಒಟ್ಟಾರೆ ಸಂಸದರ ಕ್ರೀಡಾ ಮಹಾಮೇಳದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಳ್ಳುವ ಮೂಲಕ ಸಂಸದರ ಕ್ರೀಡಾ ಮಹಾಮೇಳ ಯಶಸ್ವಿಗೋಳಿದ್ದಾರೆ ಎಂದ ಅವರು ಕ್ರೀಡೆಯಲ್ಲಿ ಸೋಲು ಗೆಲುವ ಸಹಜ ಸೋತವರು ಮತ್ತೆ ಗೆಲ್ಲುವ ಗುರಿ ಬೆನ್ನಟ್ಟಿ ಮುಂದೆ ಸಾಗಬೇಕು ಎಂದರು.

ಬೀದರ ಉತ್ತರ ಶಾಸಕ ರಹೀಮ್ ಖಾನ್ ಮಾತನಾಡಿ ಸಂಸದರಾದ ಭಗವಂತ ಖೂಬಾ ರವರ ಸಹಕಾರದಿಂದ ಇಂದು ಗ್ರಾಮ,ತಾಲೂಕು ಹಾಗೂ ಜಿಲ್ಲಾ ಮಟ್ಟದಿಂದÀ ಕ್ರೀಡಾ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯವಾಗಿದೆ. ಕ್ರೀಡಾ ಮಹಾಮೇಳದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೀದರ ನಗರಾಭವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ, ಶಿಲ್ಪಾ .ಎಂ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ, ಬೀದರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶ ಚಂದ್ರಕಾAತ ಶಹಬಾದಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷ,ಶಿವಶರಣಪ್ಪ ವಾಲಿ, ಬಸವರಾಜ ಧನ್ನೂರ, ಮುಖಂಡರಾದ ಗುರುನಾಥ ಕೊಳ್ಳುರ,ಬಿ.ಜಿ ಶೆಟಕಾರ,ವಿಜಕುಮಾರ ಪಾಟೀಲ್ ಗಾದಗಿ,ರಮೇಶಕುಮಾರ ಗೋಯಲ್,ಎಲ್ಲಾ ತಾಲೂಕಿನ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಕ್ರೀಡಾ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ದೈಹಿಕ ಶಿಕ್ಷಕರು ಕ್ರೀಡಾ ಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವ ಸಲಹೆಗಾರ ಶಿವರಾಜ ಕಣಜಿ ಅವರಿಗೆ ಸಹಕಾರ ರತ್ನ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಡಾ. ಶ್ರೀನಿವಾಸರೆಡ್ಡಿ ಮುದನಾಳರಿಗೆ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು