ಬೀದರ್: ಬೈಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯರಿಗೆ ಬೆದರಿಕೆ ಹಾಕುತ್ತಿರುವುದು ಖಂಡನಾರ್ಹ. ಮಠಾಧೀಶರು, ಚಿಂತಕರಿಗೆ ಬೆದರಿಕೆ ಹಾಕುವವರ ವಿರುದ್ಧ ಸರ್ಕಾರ ಅತ್ಯಂತ ಕಠಿಣ ಕ್ರಮ ಜರುಗಿಸಲಿದೆ’ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಮೂಲಭೂತವಾದಿಗಳು, ಯಾರೇ ಸಮಾಜಘಾತುಕ ಶಕ್ತಿಗಳು ಹಾಗೂ ಇನ್ನಿತರೆ ಯಾರೇ ಆಗಿರಲಿ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು. ಚಿಂತಕ ಎಂ.ಎಂ.ಕಲಬುರಗಿ ಅವರ ಹತ್ಯೆಗೆ ಕಾರಣಕರ್ತರಾದವರನ್ನು ಪತ್ತೆ ಹಚ್ಚಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ’ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.