ಬೀದರ್: ವೇದಿಕೆ ಕಾರ್ಯಕ್ರಮದಲ್ಲಿ ರಾಮಮಂದಿರ ವಿಚಾರವಾಗಿ ಮೂವರು ಶಾಸಕರ ನಡುವೆ ಟಾಕ್ ಪೈಟ್ ನಡೆದಿರುವ ಘಟನೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ.
ಬಿಜೆಪಿ-ಕಾಂಗ್ರೆಸ್ ಶಾಸಕರ ನಡುವೆ ಟಾಕ್ ಪೈಟ್ ನಡೆದಿದೆ. ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ , ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮತ್ತು ಹುಮನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ ನಡುವೆ ಟಾಕ್ ಪೈಟ್ ನಡೆದಿದೆ.
ಸಚಿವರಾದ ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಸಂಸದ ಉಮೇಶ ಜಾಧವ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಮಂದಿರ ಕುರಿತು ಮೊದಲು ಮಾತನಾಡಿದ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು, ಮೋದಿ ನೇತೃತ್ವದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ವಾಗ್ತಿದೆ, ಎಲ್ಲರೂ ಹಬ್ಬದ ರೀತಿ ಸಂಭ್ರಮಿಸಬೇಕು. ಕೋಟ್ಯಾನು ಹಿಂದೂಗಳ 500 ವರ್ಷಗಳ ಕನಸು ಈಡೇರಿದೆ ಎಂದು ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಹೇಳಿದ್ದರು.
ಬಳಿಕ ಮಾತನಾಡಿದ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್, ಧಾರ್ಮಿಕ ಕಾರ್ಯಕ್ರಮವನ್ನ ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಸಲಗಾರಗೆ ಟಾಂಗ್ ಕೊಟ್ಟಿದ್ದರು.
ಇದು ಧಾರ್ಮಿಕ ಕಾರ್ಯಕ್ರಮ ಇದೆ, ಧರ್ಮದ ಬಗ್ಗೆ ಮಾತನಾಡಿದ್ರೇ ಏನು ತಪ್ಪು…?
ಧರ್ಮದ ಬಗ್ಗೆ ಮಾತನಾಡಿದ್ರೆ ಕೆಲವರಿಗೆ ಅರಗಿಸಿಕೊಳ್ಳೋಕೆ ಆಗೊಲ್ಲಾ. ಅಂಥವರಿಗೆ ಏನು ಮಾಡೋಕಾಗಲ್ಲಾ ಎಂದು ಶಾಸಕರ ಹೆಸರು ಹೇಳದೆ ಸಿದ್ದು ಪಾಟೀಲ್ ಆಳಂದ ಕಾಂಗ್ರೆಸ್ ಶಾಸಕರಿಗೆ ಹುಮನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಎದುರೇಟು ನೀಡಿದ್ದಾರೆ.