Categories: ಬೀದರ್

ನೀರಿಲ್ಲದೆ ತೆಲಂಗಾಣಕ್ಕೆ ಗುಳೆ ಹೊರಟ ತಾಂಡಾ ಜನ

ಬೀದರ್: ಈ ಬಾರಿ ಮಳೆ ಕೊರತೆಯಿಂದ ನೀರಿನ ಮೂಲಗಳು ಬತ್ತಿ ಹೋಗಿ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ನೀರಿಗಾಗಿ ಪರಿತಪಿಸುವಂತಾಗಿದೆ.

ತಾಲ್ಲೂಕಿನ ಜಮಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಾರ್ಡರ್ ತಾಂಡಾದಲ್ಲಿ ಈ ಬಾರಿ ನೀರಿನ ಸಮಸ್ಯೆ ಪ್ರತಿ ಬಾರಿಗಿಂತಲೂ ಹೆಚ್ಚಾಗಿದೆ.

ಇರುವ ಎರಡು ಕೊಳವೆಬಾವಿ ರೀಬೋರ್ ಮಾಡಿದರೂ ಹನಿ ನೀರು ಬಂದಿಲ್ಲ. ಬುಧವಾರ ಹೊಸದಾಗಿ 500 ಅಡಿ ಆಳದ ಕೊಳವೆಬಾವಿ ಕೊರೆದರೂ ವಿಫಲವಾಗಿದೆ. ಹೀಗಾಗಿ ತಾಂಡಾ ಜನ ನೀರಿಗಾಗಿ ಪಕ್ಕದ ತೆಲಂಗಾಣ ರಾಜ್ಯದ ಗ್ರಾಮಗಳಿಗೆ ವಲಸೆ ಹೋಗುತ್ತಿದ್ದಾರೆ.

‘ಎರಡು ತಿಂಗಳಿನಿಂದ ಅಲ್ಪಸ್ವಲ್ಪ ನೀರಿನಿಂದ ಜೀವನ ಮಾಡಿದೆವು. ಆದರೆ, ಈಗ ಎರಡು ವಾರಗಳಿಂದ ಹನಿ ನೀರಿಲ್ಲ. ಬದುಕು ಕಷ್ಟವಾಗಿದೆ. ನಮ್ಮ ಬದುಕಿಗೆ ಆಧಾರವಾಗಿರುವ ಜಾನುವಾರುಗಳನ್ನು ಬದುಕಿಸಿಕೊಳ್ಳಬೇಕು. ಹೀಗಾಗಿ ಜಾನುವಾರುಗಳೊಂದಿಗೆ ಪಕ್ಕದ ತೆಲಂಗಾಣದ ಕಡೆ ಹೋಗುತ್ತಿದ್ದೇವೆ’ ಎನ್ನುತ್ತಾರೆ ಬಾರ್ಡರ್ ತಾಂಡಾ ನಿವಾಸಿಗಳು.

‘ನೀರಿಲ್ಲದೆ ವಾರದಿಂದ ಸ್ನಾನ ಮಾಡಿಲ್ಲ. ಕುಡಿಯಲು 2 ಕಿ.ಮೀ. ದೂರದಿಂದ ತೋಟ- ಹೊಲಗಳನ್ನು ತಿರುಗಾಡಿ ನೀರು ತರಬೇಕಾಗಿದೆ. ಈ ಕಷ್ಟ ಇನ್ನೆಷ್ಟು ದಿನ ಇರುತ್ತದೋ ಆ ದೇವರೇ ಬಲ್ಲ’ ಎಂದು ತಾಂಡಾ ಮಹಿಳೆಯರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇರುವ ಎರಡು ಕೊಳವೆಬಾವಿಗಳಲ್ಲಿ ನೀರಿಲ್ಲ. ಹೊಸದಾಗಿ ಕೊರೆದ ಬಾವಿಯಲ್ಲೂ ನೀರು ಬಂದಿಲ್ಲ. ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರ ಇದೆ. ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇವೆ’ ಎಂದು ತಾಂಡಾದ ಮುಖಂಡ ಪಂಢರಿನಾಥ ಚವಾಣ್ ಹೇಳಿದ್ದಾರೆ.

‘ಜಮಗಿ ಪಂಚಾಯಿತಿಯಲ್ಲಿ ಬಾರ್ಡರ್ ತಾಂಡಾ, ಪೋಮಾ ತಾಂಡಾ ಹಾಗೂ ಡಾಕು ತಾಂಡಾಗಳಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಖಾಸಗಿಯವರಿಗೆ ಸೇರಿದ ನೀರಿನ ಮೂಲವೂ ಇಲ್ಲ. ಹೀಗಾಗಿ ಸಮಸ್ಯೆ ತೀವ್ರವಾಗಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ’ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರಣಪ್ಪ ತಿಳಿಸಿದ್ದಾರೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago