News Karnataka Kannada
Friday, May 17 2024
ಬೀದರ್

ಬೀದರ್: ಗುರುದ್ವಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Union Home Minister Amit Shah visits Gurdwara in Bidar
Photo Credit : News Kannada

ಬೀದರ್: ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ಇಲ್ಲಿಯ ಗುರುದ್ವಾರಕ್ಕೆ ಭೇಟಿ ಕೊಟ್ಟು ಗುರು ಗ್ರಂಥ ಸಾಹೀಬ ದರ್ಶನ ಪಡೆದರು.

ಸುರಕ್ಷತೆಯ ದೃಷ್ಟಿಯಿಂದ ಅಮಿತ್‌ ಶಾ ಆಗಮನದ ಸುದ್ದಿಯನ್ನು ಗೌಪ್ಯವಾಗಿ ಇಡಲಾಗಿತ್ತು. ಸಂಜೆ ಬಿಡುಗಡೆ ಮಾಡಿದ್ದ ಪ್ರಕಟಣೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಿಂದ ಬೀದರ್‌ಗೆ ಬರಲಿದ್ದಾರೆ ಎಂದು ತಿಳಿಸಲಾಗಿತ್ತು. ಅವರು ರಾತ್ರಿಯೇ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಬಂದಿದ್ದಾರೆ.

ಗುರುದ್ವಾರ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಮಿತ್‌ ಶಾ ಇದ್ದ ವಾಹನ ಗುರುದ್ವಾರದ ಪ್ರವೇಶ ದ್ವಾರದ ವರೆಗೂ ಬಂದಿತು. ಅಲ್ಲಿ ಪಕ್ಷದ ಕಾರ್ಯಕರ್ತರು ಅವರಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ನಂತರ ಅವರು ನಾನಕ್ ಝೀರಾ ಅಮೃತ ಕುಂಡದ ದರ್ಶನ ಪಡೆದರು.

ಮೆಟ್ಟಿಲುಗಳನ್ನು ಏರಿ ಗುರುದ್ವಾರಕ್ಕೆ ಹೋಗುವುದು ಕಷ್ಟವಾಗಲಿದೆ ಎನ್ನುವ ಕಾರಣಕ್ಕೆ ಗುರುದ್ವಾರ ಪ್ರಬಂಧಕ ಕಮಿಟಿಯವರು ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆ ಮಾಡಿದ್ದರು.ಅಮಿತ್‌ ಶಾ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರು ಒಂದು ವಾಹನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನೊಂದು ವಾಹನದಲ್ಲಿ ಕುಳಿತು ಲಂಗರ್‌ ಭವನದ ಮುಂಭಾಗದಿಂದ ಗುರುದ್ವಾರ ಪ್ರವೇಶಿಸಿದರು.

ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರ್‌ ಸಿಂಗ್‌, ಮನಪ್ರೀತ್‌ ಸಿಂಗ್‌ ಖನೋಜಾ ಅವರು ಗಣ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ‍ ಪಾಟೀಲ ಮುನೇನಕೊಪ್ಪ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಬಿಜೆಪಿ ಮುಖಂಡರಾದ ಗುರುನಾಥ ಕೊಳ್ಳೂರು, ಸೂರ್ಯಕಾಂತ ನಾಗಮಾರಪಳ್ಳಿ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ‍ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು