News Karnataka Kannada
Saturday, May 18 2024
ಬೀದರ್

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಕೇಂದ್ರ ಸಚಿವ ಭಗವಂತ ಖೂಬಾ

ಈ ಲೋಕಸಭಾ ಚುನಾವಣೆ ಬಳಿಕ ಶಾಸಕರ ಅಸಮಾಧಾನ ಸ್ಪೋಟಗೊಂಡು ಕಾಂಗ್ರೆಸ್​ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಭವಿಷ್ಯ ನುಡಿದರು.
Photo Credit : NewsKarnataka

ಬೀದರ್ : ಈ ಲೋಕಸಭಾ ಚುನಾವಣೆ ಬಳಿಕ ಶಾಸಕರ ಅಸಮಾಧಾನ ಸ್ಪೋಟಗೊಂಡು ಕಾಂಗ್ರೆಸ್​ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಭವಿಷ್ಯ ನುಡಿದರು. ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ವಿಚಾರವಾಗಿ ಬೀದರ್​ನಲ್ಲಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ನಾವು 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಡಿಸಿದರು.

ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಆಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಅಸಮಾಧಾನ ಇದೆ. ಈ ಚುನಾವಣೆ ಬಳಿಕ ಶಾಸಕರ ಅಸಮಾಧಾನ ಸ್ಪೋಟ ಆಗುತ್ತದೆ. ಅವರಿಂದಲೇ ಈ ಸರ್ಕಾರ ಬಿದ್ದು ಹೋಗುತ್ತದೆ. ಚುನಾವಣೆ ಬಳಿಕ ಸರ್ಕಾರ ಬೀಳುವುದರಲ್ಲಿ ಎರಡು ಮಾತಿಲ್ಲ ಎಂದರು ಕುಟುಕಿದರು.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಅವಶ್ಯಕತೆನೇ ಬರಲ್ಲ. ಈ ಸರ್ಕಾರ ಪತನ ಹಾಗೇ ಆಗುತ್ತದೆ. ನಾವು ಆಪರೇಷನ್ ಕಮಲ ಮಾಡುವ ಅವಶ್ಯಕತೆ ಇಲ್ಲ. ಸ್ವತ ಕಾಂಗ್ರೆಸ್ ಶಾಸಕರೇ ಹೊರಗಡೆ ಬರುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯಅವರದ್ದುಒಂದು ಕೆಟ್ಟಚಾಳಿ

ಕೇಂದ್ರ ಸರ್ಕಾರದಿಂದ ನಯಾ ಪೈಸಾ ಯಾವುದೇ ರಾಜ್ಯಕ್ಕೂ ಕೊಡುವುದು ಬಾಕಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರದ್ದು ಒಂದು ಕೆಟ್ಟ ಚಾಳಿ. ತಾವು ಬಚಾವ್ ಆಗಲು ಇಂತಹ ಕೆಲಸ ಮಾಡುತ್ತಾರೆ. ಸುಪ್ರಿಂ ಕೋರ್ಟ್ ಮೊನ್ನೆ ಚಾಟಿ ಬೀಸಿದೆ. ಲೊಕಸಭೆ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವಂತ ವ್ಯರ್ಥ ಪ್ರಯತ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಭಗವಂತ ಖೂಬಾ ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು