News Karnataka Kannada
Sunday, April 28 2024
ಬೀದರ್

ಬೀದರ್ ನ ಹುಮನಾಬಾದ್‌ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ

'ದಿನ ಬೆಳಗಾದರೆ ನಾವು ಕೂಲಿ ಕೆಲಸಕ್ಕೆ ಹೋಗಬೇಕು. ಇಲ್ಲದಿದ್ದರೆ ಮನೆಯ ನಿರ್ವಹಣೆ ಕಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಮನೆಮಂದಿ ಎಲ್ಲರೂ ನೀರಿಗಾಗಿ ಕಾಯ್ದುಕೊಂಡು ಇರಬೇಕಾದ ಪರಿಸ್ಥಿತಿ ಬಂದಿದೆ'. ಇದು ಹುಮನಾಬಾದ್ ಪಟ್ಟಣದ ಉಪಾರ್ ಹಾಗೂ ಧನಗರ್ ಗಡ್ಡ ಬಡಾವಣೆಯ ಜನರ ಗೋಳು.
Photo Credit : NewsKarnataka

ಹುಮನಾಬಾದ್‌: ‘ದಿನ ಬೆಳಗಾದರೆ ನಾವು ಕೂಲಿ ಕೆಲಸಕ್ಕೆ ಹೋಗಬೇಕು. ಇಲ್ಲದಿದ್ದರೆ ಮನೆಯ ನಿರ್ವಹಣೆ ಕಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಮನೆಮಂದಿ ಎಲ್ಲರೂ ನೀರಿಗಾಗಿ ಕಾಯ್ದುಕೊಂಡು ಇರಬೇಕಾದ ಪರಿಸ್ಥಿತಿ ಬಂದಿದೆ’. ಇದು ಹುಮನಾಬಾದ್‌ ಪಟ್ಟಣದ ಉಪಾರ್ ಹಾಗೂ ಧನಗರ್ ಗಡ್ಡ ಬಡಾವಣೆಯ ಜನರ ಗೋಳು.

ಕಾರಂಜಾ ಜಲಾಶಯದಿಂದ ಮೂರ್ನಾಲ್ಕು ದಿನಕ್ಕೆ ಒಮ್ಮೆ ಬಿಡಲಾಗುತ್ತಿರುವ ನೀರು ಸಮಯಕ್ಕೆ ಬಾರದೆ ಇರುವುದರಿಂದ ನಮ್ಮ ಬೇರೆಲ್ಲ ಕೆಲಸ ಬಿಟ್ಟು ನೀರಿಗಾಗಿ ಕಾಯುವುದು ನಿತ್ಯದ ಕಾಯಕವಾಗಿದೆ’ ಎಂದು ಉಪಾರ್ ಬಡಾವಣೆಯ ಸಾವಿತ್ರಿಬಾಯಿ, ಶಾಂತಾಬಾಯಿ ಗೋವಿಂದ್ ಬೇಸರ ವ್ಯಕ್ತಪಡಿಸಿದರು.

‘ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳಿದ್ದು ಬಹುತೇಕ ವಾರ್ಡ್‌ಗಳಲ್ಲಿ ನೀರಿಗಾಗಿ ನಿತ್ಯ ಪರದಾಡುವುದು ಸಹಜವಾಗಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ’ ಎನ್ನುವುದು ಸಾರ್ವಜನಿಕರ ದೂರುತ್ತಿದ್ದಾರೆ. ನೀರಿನ ಸಮಸ್ಯೆಯಿಂದಾಗಿ ನಾವು ಸರಿಯಾಗಿ ಊಟ ಸಹ ಮಾಡದಂತಹ ಪರಿಸ್ಥಿತಿ ಬಂದಿದೆ. ನಮ್ಮ ಈ ಕಷ್ಟವನ್ನು ಅರಿತು ಕನಿಷ್ಠ ಎರಡು ದಿನಕ್ಕೊಮ್ಮೆ ಆದರೂ ನೀರು ಸರಬರಾಜು ಮಾಡಿ ಎಂದು ಉಪಾರ್ ಬಡಾವಣೆಯ ಶೋಭಾ, ಮೀನಾಕ್ಷಿ ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು