News Karnataka Kannada
Tuesday, April 30 2024
ಬೀದರ್

ಬಡವರಿರುವ ಶ್ರೀಮಂತ ಭಾರತ ಬೇಕಿಲ್ಲ: ಪ್ರೊ.ಅಪ್ಪಗೆರೆ ಸೋಮಶೇಖರ

ಡಾ.ಬಿ.ಆರ್.ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಸಮಿತಿಯಿಂದ ನಗರದಲ್ಲಿ ಭಾನುವಾರ ರಾತ್ರಿ ಬಾಬಾ ಸಾಹೇಬರ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
Photo Credit : NewsKarnataka

ಬೀದರ್: ಡಾ.ಬಿ.ಆರ್.ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಸಮಿತಿಯಿಂದ ನಗರದಲ್ಲಿ ಭಾನುವಾರ ರಾತ್ರಿ ಬಾಬಾ ಸಾಹೇಬರ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಅಪ್ಪಗೆರೆ ಸೋಮಶೇಖರ ಮಾತನಾಡಿ,’ಬಡವರಿರುವ ಶ್ರೀಮಂತ ಭಾರತ ನಮಗೆ ಬೇಕಿಲ್ಲ. ಸಮಾನತೆ, ಸಮೃದ್ಧ ಭಾರತ ಬೇಕಿದೆ’ ಎಂದರು.

ದೇಶದ ಭೂಮಿಯನ್ನು ರಾಷ್ಟ್ರೀಕರಣ ಮಾಡಿ ಸಹಕಾರ ಬೇಸಾಯ ಪದ್ಧತಿ ಮೂಲಕ ಕೃಷಿ ಅಭಿವೃದ್ಧಿ ಪಡಿಸಬೇಕು. ದೇಶದ ಎಲ್ಲರಿಗೂ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ಅಂಬೇಡ್ಕರ್‌ ಅವರ ಜಯಂತಿಯನ್ನು ಎಲ್ಲ ಮಠ, ಮಂದಿರ, ಮಸೀದಿ, ವಿಹಾರಗಳಲ್ಲಿ ಆಚರಿಸುವಂತಾಗಬೇಕು. ಆಗ ನಿಜವಾದ ಭಾರತೀಯರ ಭಾವೈಕ್ಯ ತೋರಿಸಿದಂತಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿ.ಜಿ.ಸಾಗರ ಮಾತನಾಡಿ, ‘ಸಂವಿಧಾನದ ಪ್ರಕಾರ ಆಡಳಿತ ನಡೆಸುವ ಹೆಸರಲ್ಲಿ ದೇಶದ ವಿವಿಧ ವಲಯಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಸಂವಿಧಾನದ ಆಶಯಕ್ಕೆ ಧಕ್ಕೆ ಬಂದಿದೆ. ದೇಶದ ಸಂಪತ್ತು ಬಂಡವಾಳಶಾಹಿಗಳ ಹಿಡಿತಕ್ಕೆ ಒಳಗಾಗುತ್ತಿರುವುದನ್ನು ದೇಶದ ಪ್ರಜೆಗಳು ತಡೆಯಬೇಕಿದೆ’ ಎಂದರು.

ವಿಠ್ಠಲ್ ವಗ್ಗನ ಮಾತನಾಡಿ,’ಜಾತಿ ವ್ಯವಸ್ಥೆ ಬೇರು ಬಿಟ್ಟಿರುವ, ಬಿಡುತ್ತಿರುವ ಸಾಹಿತ್ಯ ಕೃತಿಗಳು ಕೈಬಿಡಬೇಕು. ಜಾತಿ  ವ್ಯವಸ್ಥೆ ರೂಪಿಸುವ ಕೃತಿಗಳನ್ನು ಸಾಹಿತಿಗಳು ಬರೆಯಬಾರದು’ ಎಂದು ಹೇಳಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮಾತನಾಡಿ,’ಸಾಮಾಜಿಕ ಸಮಾನತೆಗಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಮಹಿಳಾ ಸಮಾಜಕ್ಕೆ ಸಾಮಾಜಿಕ ನ್ಯಾಯಕ್ಕಾಗಿ ಬಾಬಾ ಸಾಹೇಬರು ಕಾನೂನು ಮಂತ್ರಿ ಸ್ಥಾನ ತ್ಯಜಿಸಿದ್ದರು. ಇಬ್ಬರ ಕೊಡುಗೆ ಸಮಾಜ ಮರೆಯಬಾರದು’ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ,’ಬುದ್ಧ, ಬಸವ, ಅಂಬೇಡ್ಕರ್‌ ಅವರನ್ನು ಅರ್ಥ ಮಾಡಿಕೊಂಡು ನುಡಿದಂತೆ ನಡೆಯಬೇಕು’ ಎಂದು ತಿಳಿಸಿದರು.

ಮುಖಂಡ ರಮೇಶ ಡಾಕುಳಗಿ ಮಾತನಾಡಿ,’ಅಂಬೇಡ್ಕರ್‌ ಅವರ ಪ್ರಯತ್ನದಿಂದ ದೇಶದ ಎಲ್ಲ ನಾಗರಿಕರಿಗೂ ಮತದಾನದ ಹಕ್ಕು ಸಿಕ್ಕಿದೆ’ ಎಂದರು.

ತಡರಾತ್ರಿ ವರೆಗೆ ಸಂಭ್ರಮ: ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಅಂಗವಾಗಿ ನಗರದ ವಿವಿಧ ಭಾಗಗಳಿಂದ ಬಾಬಾ ಸಾಹೇಬರ ಭಾವಚಿತ್ರಗಳನ್ನು ಅಲಂಕರಿಸಿದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಡಿ.ಜೆ ಸದ್ದಿಗೆ ಕುಣಿಯುತ್ತ ಅಂಬೇಡ್ಕರ್‌ ಪರ ಘೋಷಣೆಗಳನ್ನು ಕೂಗುತ್ತ ಹೆಜ್ಜೆ ಹಾಕಿದರು. ಎಲ್ಲ ವಯೋಮಾನದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಜನ ಅಂಬೇಡ್ಕರ್‌ ವೃತ್ತಕ್ಕೆ ಬಂದದ್ದರಿಂದ ಜಾತ್ರೆಯ ವಾತಾವರಣ ಸೃಷ್ಟಿಯಾಗಿತ್ತು. ತಡರಾತ್ರಿ ವರೆಗೆ ಸಂಭ್ರಮಾಚರಣೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು