News Karnataka Kannada
Saturday, April 27 2024
ಕಲಬುರಗಿ

ಕೆಇಎ ಪರೀಕ್ಷೆ ಅಕ್ರಮ ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

Klb
Photo Credit : News Kannada

ಕಲಬುರಗಿ: ರಾಜ್ಯದಲ್ಲಿ ಪರೀಕ್ಷಾ ಅಕ್ರಮ ಜೋರಾಗಿ ಸದ್ದು ಮಾಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ್ ಪರೀಕ್ಷಾ ಮುಖ್ಯಸ್ಥನಾಗಿದ್ದರೆ, ಪರೀಕ್ಷಾ ಕೇಂದ್ರದ ಪ್ರಶ್ನೆಪತ್ರಿಕೆ ಕಸ್ಟೋಡಿಯನ್ ಬಸಣ್ಣ ಪೂಜಾರಿ ಆಗಿದ್ದರು. ಈ ಹಿನ್ನಲೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಕಲಬುರಗಿ ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಜೊತೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿತ್ತು. ಹೌದು, ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ಇದೀಗ ಇಬ್ಬರು ಉಪನ್ಯಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು