News Karnataka Kannada
Sunday, April 28 2024
ಕಲಬುರಗಿ

ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿ ಅನುಭವಿಸಿದ್ದೇವೆ: ದಿನೇಶ್ ಗುಂಡೂರಾವ್

ದೇಶದ್ರೋಹಕ್ಕೆ ಸಮರ್ಥನೆ ಇರುವುದಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಯಾರೇ ಕೂಗಿರಲಿ, ಅದು ಅಪರಾಧ. ಅದಕ್ಕೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Photo Credit : News Kannada

ಕಲಬುರಗಿ: ದೇಶದ್ರೋಹಕ್ಕೆ ಸಮರ್ಥನೆ ಇರುವುದಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಯಾರೇ ಕೂಗಿರಲಿ, ಅದು ಅಪರಾಧ. ಅದಕ್ಕೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಅಂತಹ ಅನೇಕ ದೇಶದ್ರೋಹಿ ಘಟನೆಗಳು ಹಿಂದೆ ದೇಶದ ಹಲವೆಡೆಯಲ್ಲಿ ನಡೆದಿವೆ ಎಂದು ನೆನಪಿಸಿದರು.ಬಿಜೆಪಿ ರಾಜ್ಯದಲ್ಲೂ ಮತ್ತು ಕೇಂದ್ರದಲ್ಲೂ ಅಧಿಕಾರದಲ್ಲಿದ್ದಾಗ ದೇಶದ್ರೋಹಿ ಘಟನೆಗಳು ನಡೆದಿಲ್ಲವೇ ಎಂದು ಪ್ರಶ್ನಿಸಿದ ಅವರು, ಪುಲ್ವಾಮಾ ದಾಳಿ ನಡೆದಾಗ ಯಾರು ಪ್ರಧಾನಿಯಾಗಿದ್ದರು ಎಂದು ಪ್ರಶ್ನಿಸಿದರು. ಎಂ.ಎಂ. ಕಲ್ಬುರ್ಗಿ, ಗೌರಿ ಲಂಕೇಶ್ ಹತ್ಯೆಗಳ ಹಿಂದೆ ಯಾರ ಕೈವಾಡವಿದೆಯೋ, ಅವರ ಕೈವಾಡವೇ ಈಗಲೂ ಇದೆ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಹರಿಹಾಯ್ದರು.ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕುರಿತು ಪ್ರಸ್ತಾಪಿಸಿದ ಅವರು ಇದೊಂದು ನೈತಿಕತೆ ಇಲ್ಲದ, ಅನಿವಾರ್ಯದ ಭಯದ ಮೈತ್ರಿಯಾಗಿದೆ ಎಂದರು.

ಈ ಹಿಂದೆ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ಈಗ ಬಿಜೆಪಿಗರ ಸರದಿ. ಮೈತ್ರಿ ಮಾಡಿ ಅನುಭವಿಸಿದ ನಂತರ ಎಲ್ಲವೂ ವಾಸ್ತವಕ್ಕೆ ಬರಲಿದೆ ಎಂದರು.

ಕಾಂಗ್ರೆಸ್ ನಲ್ಲಿ ದುಡ್ಡು ಕೊಟ್ಟರೆ ಟಿಕೆಟ್ ಕೊಡ್ತಾರೆ ಎನ್ನುವ ಮಂಡ್ಯ ರವೀಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಅವರು, ರವಿ ಯಾರು? ಎಲ್ಲಿಂದ ಬಂದವರು ಮತ್ತು ಯಾಕೆ ಹಾಗೆ ಮಾತನಾಡಿದ್ದಾರೆ ಎನ್ನುವುದು ಅವರಿಗೆ ಬಿಟ್ಟ ವಿಚಾರ. ಟಿಕೆಟ್ ಗಾಗಿ ಹಣ ಪಡೆಯುತ್ತಾರೆ ಎನ್ನುವುದು ಸುಳ್ಳು. ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.

ಈ ಬಾರಿ ಲೋಕಸಭೆಯಲ್ಲಿ ಜನ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದ ಅವರು, ಒಟ್ಟು 20 ಸ್ಥಾನಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಜನರಿಗೆ ಮಾತು ಕೊಟ್ಟಂತೆ ಎಲ್ಲ ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ. ಅವುಗಳನ್ನು ಹೊರತುಪಡಿಸಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಕೂಡ ಹಣವನ್ನು ವಿನಿಯೋಗ ಮಾಡಿ ಅವುಗಳನ್ನು ಕೂಡ ಕಾರ್ಯಗತ ಮಾಡುತ್ತಿದ್ದೇವೆ. ಇದರಿಂದಾಗಿ ಜನರಿಗೆ ಸಿದ್ದರಾಮಯ್ಯ ಅವರ ಸರ್ಕಾರದ ಮೇಲೆ ನಂಬಿಕೆ ಬಂದಿದೆ ಈ ನಂಬಿಕೆಯೇ ನಮ್ಮನ್ನು ಲೋಕಸಭೆಯಲ್ಲಿ ಕೈಹಿಡಿದು ಮುನ್ನಡೆಸಲಿದೆ ಎಂದರು.

ಈ ವೇಳೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಡಾ. ಅಜಯ್ ಸಿಂಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು