ಕಲಬುರಗಿ: ಲೋಕಸಭಾ ಚುನಾವಣಾ ನಿಮಿತ್ಯ ಕಲಬುರಗಿ ಜಿಲ್ಲೆಯಲ್ಲಿ ಮಹತ್ತರ ರಾಜಕೀಯ ಬದಲಾವಣೆಗಳು ಆಗುತ್ತಿವೆ ಅದು ಸಹಜ.ಆದರೆ ಗುತ್ತೇದಾರ ಸಹೋದರರ ರಾಜಕೀಯ ನಡೆಗಳಿಂದ ಮತದಾರರು ಗೊಂದಲಕ್ಕೆ ಈಡಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವನ ಹತ್ತಿರದಲ್ಲಿ ಸೊಲುಂಡ ನಿತೀನ್ ಗುತ್ತೇದಾರ ಬಿಜೆಪಿ ಪಕ್ಷ ಸೇರಿದರೆ,ಬಿಜೆಪಿ ಪಕ್ಷದಲ್ಲಿ ಪ್ರಭಾವಿ ಮುಖಂಡರಾಗಿ ಬೆಳೆದಿರುವ ಮಾಲೀಕಯ್ಯ ಗುತ್ತೇದಾರ ಅವರ ಗಮನಕ್ಕೂ ತರದೇ,ನಿತೀನ್ ಗುತ್ತೇದಾರ ಅವರಿಗೆ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿರುವುದು ಮಾಲೀಕಯ್ಯ ಗುತ್ತೇದಾರ ಸಿಟ್ಟಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.ಮುಂದೆ ಮಾಲೀಕಯ್ಯ ಗುತ್ತೇದಾರ ಅವರ ರಾಜಕೀಯ ನಡೆಯ ಬಗ್ಗೆ ಹತ್ತು ಹಲವು ಚರ್ಚೆಗಳಾಗುತ್ತಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ದಯಾನಂದ ದೊಡ್ಮನಿ ಮಾಲೀಕಯ್ಯ ಗುತ್ತೇದಾರ ಅವರು ಮೂಲತಃ ಕಾಂಗ್ರೆಸ್ ಪಕ್ಷದ ಮುಖಂಡರು.ಆರು ಬಾರಿ ಅಫಜಲಪುರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾದವರು,ಇತ್ತಿಚಿನ ರಾಜಕೀಯ ಬೆಳವಣಿಗೆಗಳಿಂದ ಬಿಜೆಪಿ ಪಕ್ಷಕ್ಕೆ ಹೋಗಿದ್ದಾರೆ.ಆದರೆ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ನಮ್ಮ ಸ್ವಾಗತವಿದೆ.ಆದರೆ ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರು ಅದಕ್ಕೆ ನಾವೆಲ್ಲರೂ ಬದ್ದರಾಗಿರುತ್ತೆವೆ.
ಕಾರ್ಯಕರ್ತರಾಗಿ ನಾವೆಲ್ಲಾ ನಮ್ಮ ಕಾಂಗ್ರೆಸ್ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಮಾಲೀಕಯ್ಯ ಗುತ್ತೇದಾರ ಅವರಿಗೆ ಸೇರ್ಪಡೆ ಮಾಡಿಕೊಂಡಿದ್ದೆಯಾದರೆ ನಾವು ಸ್ವಾಗತಿಸುತ್ತೆವೆ ಎಂದರು. ಅದಲ್ಲದೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರು ಬೇರೆಬೇರೆ ಪಕ್ಷಗಳಿಗೆ ವಲಸೆ ಹೋಗಿದ್ದಾರೆ. ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿದ್ದಾಂತ ಒಪ್ಪಿಕೊಂಡು ಬಿಜೆಪಿ ಪಕ್ಷದ ದುರಾಡಳಿತ ಧಿಕ್ಕರಿಸಿ ಬರುವುದಾದರೇ ಅವರಿಗೂ ನಮ್ಮ ಸ್ವಾಗತವಿದೆ ಎಂದರು