ಕಲಬುರಗಿ: ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇಸ್ರೇಲ್- ಗಾಜಾ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಸಾಮಾನ್ಯ ಪ್ರಜೆಗಳು ಸಾವಿಗೀಡಾಗುತ್ತಿದ್ದಾರೆ. ಗಾಜಾ ಮತ್ತು ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದೆ. ಮಕ್ಕಳು, ಅಮಾಯಕರು ಇಸ್ರೇಲ್ ದಾಳಿಗೆ ಬಲಿಯಾಗುತ್ತಿದ್ದಾರೆ. ಯುದ್ಧದಿಂದ ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದ್ದು, ಯುದ್ಧ ನಿಲ್ಲಿಸಿ ಶಾಂತಿ ನೆಲೆಸಬೇಕೆಂದು ಹೋರಾಟಗಾರರು ಆಗ್ರಹಿಸಿದರು.
ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.