ಕಲಬುರಗಿ

ಅಂಗನವಾಡಿ ಕೇಂದ್ರ ಹಾಗೂ ಕಾನ್ವೆಂಟ್‌ ಶಾಲೆಗಳ ಕಟ್ಟಡಗಳಲ್ಲಿ ಚಿಣ್ಣರ ಚಿಲಿಪಿಲಿ

ಕಲಬುರಗಿ : ಜಿಲ್ಲೆಯ ಅಂಗನವಾಡಿ ಕೇಂದ್ರ ಹಾಗೂ ಕಾನ್ವೆಂಟ್‌ ಶಾಲೆಗಳಲ್ಲೂ ಸೋಮವಾರ ಹಬ್ಬದ ವಾತಾವರಣ ಮನೆ ಮಾಡಿತು. ಕೊರೊನಾ ಕಾರಣದಿಂದ ಎರಡು ವರ್ಷಗಳಿಂದ ನಿಶಬ್ದವಾಗಿದ್ದ ಕಟ್ಟಡಗಳಲ್ಲಿ ಚಿಣ್ಣರ ಚಿಲಿಪಿಲಿ ಕೇಳಿಸಿತು. ಜಿಲ್ಲೆಯಲ್ಲಿ ಒಟ್ಟು 3,140 ಅಂಗನವಾಡಿಗಳಿವೆ, ಇದರಲ್ಲಿ ಕಲಬುರಗಿ ನಗರ ವ್ಯಾಪ್ತಿಯಲ್ಲೇ 499 ಇವೆ.

ಅಂಗನವಾಡಿಗಳಿಗೆ ತಳಿರು- ತೋರಣ, ಬಾಳೆದಿಂಡು, ಬಲೂನು ಕಟ್ಟಿ ಅಲಂಕಾರ ಮಾಡಲಾಗಿತ್ತು. ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮದ ಯುವತಿಯರು ಕೂಡ ಸ್ವಯಂ ಪ್ರೇರಣೆಯಿಂದ ಬಂದು ಅಂಗನವಾಡಿ ಅಂಗಳದಲ್ಲಿ ಬಣ್ಣಬಣ್ಣದ ರಂಗೋಲಿ
ಬಿಡಿಸಿದರು.

ಮೊದಲ ದಿನವೇ ಪಾಲಕರು ತಮ್ಮ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಕೊಂಡು ಅಂಗನವಾಡಿಗಳತ್ತ ಹೆಜ್ಜೆ ಹಾಕಿದರು. ಅಪ್ಪ, ಅವ್ವ, ಅಜ್ಜ, ಅಜ್ಜಿ… ಹೀಗೆ ಯಾರೆಲ್ಲ ತಮ್ಮ ಮನೆಯ ಪುಟಾಣಿಯನ್ನು ಕರೆತಂದು ಬಿಟ್ಟುಹೋದರು. ಮತ್ತೆ ಕೆಲವರು ಎರಡು ತಾಸು ಹೊರಗಡೆಯೇ ಕಾದುಕುಳಿತು ಮೆನೆ
ಕರೆದೊಯ್ದರು.

ಬಹುಪಾಲು ಕಾಡೆ ಕಾರ್ಯಕರ್ತೆ ಹಾಗೂ ಸಹಾಯಕಿಯರು ಮನೆಯಿಂದ ಮಾಡಿಕೊಂಡು ಬಂದ ಸಿಹಿ ತಿಂಡಿಗಳನ್ನು ಹಂಚಿದರು.

ಇನ್ನೊಂದೆಡೆ, ಹಳ್ಳಿಗಳಲ್ಲೂ ಮಕ್ಕಳ ಪಾಲಕರು ಕೂಡ ಅಂಗನವಾಡಿಗಳಿಗೆ ಬಂದು ಅಲಂಕಾರ ಮಾಡಿ ಸಂಭ್ರಮಿಸಿದರು. ಆರತಿ ಬೆಳಗಿ, ಚಾಕೊಲೇಟ್‌, ಲಾಲಿಪಾಪ್‌, ಬಿಸ್ಕತ್‌ ಮುಂತಾದ ತಿನಿಸುಗಳನ್ನು ನೀಡಿ ಅವರನ್ನು ಹುರುದುಂಬಿಸಿದರು. ಹೊರಗಡೆಯೇ ನಿಂತುಕೊಂಡು ತಮ್ಮ ಮಕ್ಕಳ ಆಟ, ಹಾಡು, ಕುಣಿತಗಳನ್ನು ಕಂಡು ಖುಷಿಪಟ್ಟರು.

ಇನ್ನೊಂದೆಡೆ, ಕನ್ನಡ ಹಾಗೂ ಇಂಗ್ಲಿಷ್‌ ಮಾಧ್ಯಮ ಕಾನ್ವೆಂಟ್‌ ಶಾಲೆಗಳಲ್ಲೂ ಸಂಭ್ರಮದ ವಾತಾವರಣ ಮನೆ ಮಾಡಿತು. ಶಿಕ್ಷಕಿಯರು ಶಾಲೆಗಳಲ್ಲಿ ಅಲಂಕಾರ ಮಾಡಿ, ಮಕ್ಕಳಿಗೆ ಸಿಹಿ ನೀಡಿ ಸ್ವಾಗತಿಸಿದರು. ಬೈಕ್‌, ಆಟೊಗಳಲ್ಲಿ ಮಕ್ಕಳನ್ನು ಕರೆದುಕೊಂಡು ಬಂದ ಪಾಲಕರು, ಎರಡು ತಾಸಿನ ತರಗತಿ ಮುಗಿಯುವವರೆಗೆ ಕಾದು ಮರಳಿ ಕರೆದುಕೊಂಡು ಹೋಗುತ್ತಿದ್ದುದು ಕಂಡುಬಂತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್‌ಕುಮಾರ್‌ ಹಾಗೂ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೇಮಾ ಕಲ್ಬುರ್ಗಿ ಅವರು ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಟ್ಟಡಗಳ ಸ್ಥಿತಿ, ಸುತ್ತಲಿನ ಪರಿಸರ, ಕುಡಿಯುವ ನೀರು ಸೇರಿದಂತೆ ವಿವಿಧ ಸವಲತ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

13 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

19 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

34 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

51 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago