News Karnataka Kannada
Saturday, May 04 2024
ಕಲಬುರಗಿ

ಅಕ್ರಮದ ಮೂಲ ಕಿಂಗ್​ಪಿನ್​ನ ಹೆಸರೇಳಿ: ಎಚ್​ಡಿಕೆಗೆ ಸಚಿವ ಆರಗ ಜ್ಞಾನೇಂದ್ರ ಮನವಿ

Complaint filed against Araga Gyanendra for comments on Kharge's complexion
Photo Credit :

ಕಲಬುರಗಿ: ಸರ್ಕಾರ ಬಿದ್ದರೂ ಚಿಂತೆಯಿಲ್ಲ ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮದ ಮೂಲ ಕಿಂಗ್​ಪಿನ್​ನ​ ಹೆಸರೇಳಿ. ಅವರನ್ನು ಬಂಧಿಸ್ತೀವಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮದ ಮೂಲ ಕಿಂಗ್​ಪಿನ್ ಬೇರೆ ಇದ್ದಾರೆ. ಅವರ ಹೆಸರೇಳಲು ಸರ್ಕಾರಕ್ಕೆ ಸಾಧ್ಯವೇ? ಆ ಮೂಲ ಕಿಂಗ್​ಪಿನ್​ನ ಟಚ್​ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ ಎಂದು ಶುಕ್ರವಾರ ಹಾಸನದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಬರೀ ಹಿಟ್​ ಆಯಂಡ್​ ರನ್​ ಮಾಡುತ್ತಾರೆ.

ಯಾವುದೇ ಆರೋಪ ಮಾಡಲು ಅವರಿಗೆ ಹಕ್ಕಿದೆ. ಆದರೆ ಸೂಕ್ತ ದಾಖಲೆ ನೀಡಿದರೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅವರು ಹೇಳಿದಂತೆ ಸರ್ಕಾರ ಬಿದ್ದರೂ ಚಿಂತೆಯಿಲ್ಲ, ಮೊದಲು ಕಿಂಗ್​ಪಿನ್​ನ ಹೆಸರನ್ನು ಅವರು ಸಾರ್ವಜನಿಕವಾಗಿ ಬಹಿರಂಗಪಡಿಸಲಿ. ಕಾಂಗ್ರೆಸ್​ ಮತ್ತು ಜೆಡಿಎಸ್​ನವರು ಇಲ್ಲದ ಹೇಳಿಕೆ ನೀಡುವ ಮೂಲಕ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

545 ಸಿವಿಲ್​ ಪಿಎಸ್​ಐ ನೇಮಕ ಹಗರಣದಲ್ಲಿ ಶಾಮೀಲಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಸಮರ್ಥ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವುದಾಗಿ ಗೃಹ ಸಚಿವರು ಪ್ರಕಟಿಸಿದರು. ಅಗತ್ಯಬಿದ್ದರೆ ವಿಶೇಷ ನ್ಯಾಯಾಲಯ ಸಹ ಸ್ಥಾಪಿಸಲಾಗುವುದು. ಆದರೆ ಈಗ ವೇಗ ಪದ್ಧತಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮಾಡುವಂತೆ ಕೋರಲಾಗಿದ್ದು, ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅದಕ್ಕೆ ಪೂರಕವಾಗಿರುವ ಕಾಯ್ದೆಗಳಿಗೆ ತಿದ್ದುಪಡಿ ಮಾಡಲಾಗುವುದು. ಇದುವರೆಗೆ 48 ಆರೋಪಿಗಳನ್ನು ಬಂಧಿಸಲಾಗಿದ್ದು, ತಪ್ಪೆಸಗಿದವರಿಗೆ ಶಿಕ್ಷೆ ಖಚಿತ ಎಂದು ಗುಡುಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು