News Karnataka Kannada
Saturday, May 04 2024
ಕಲಬುರಗಿ

ಒಮಿಕ್ರಾನ್ ಭೀತಿ: ದೇವಲ ಗಾಣಗಾಪುರ ದತ್ತಾತ್ರೇಯ ರಥೋತ್ಸವ ರದ್ದು

Inauguration of administrative office of Federation of Bunts Associations at Mulki on April 5
Photo Credit :

ಕಲಬುರಗಿ : ಕೋವಿಡ್ ರೂಪಾಂತರಿ ಒಮಿಕ್ರಾನ ಭೀತಿ ಹಿ‌ನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರದ ಶ್ರೀ ದತ್ತ ಜಯಂತಿ ಹಾಗು ರಥೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 18 ರಂದು ಶ್ರೀ ದತ್ತ ಮಹಾರಾಜರ ಜನ್ಮೋತ್ಸವ (ತೊಟ್ಟಿಲು) ಕಾರ್ಯಕ್ರಮ, ಡಿಸೆಂಬರ್ 19 ರಂದು ದತ್ತ ಜಯಂತಿ ಹಾಗೂ ರಥೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು. ಪ್ರತಿವರ್ಷ ಮಹಾರಾಷ್ಟ್ರ, ಆಂಧ್ರ, ತೆಲಂಗಾಣದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ರೂಡಿ ಇದೆ.

ನೆರೆಯ ಮಹಾರಾಷ್ಟ್ರದಲ್ಲಿ ಒಮಿಕ್ರಾನ ಭೀತಿ ಹೆಚ್ಚಿರುವ ಹಿನ್ನಲೆ ಹಾಗೂ ಕರ್ನಾಟಕದಲ್ಲಿ ಒಮಿಕ್ರಾನ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಢಳಿತ ಜಾತ್ರೆಗೆ ನಿಷೇಧ ಹೇರಿದೆ. ಅರ್ಚಕರು ಮತ್ತು ಸಿಬ್ಬಂದಿ ಸಮ್ಮುಖದಲ್ಲಿ ದೇಗುಲ ಆವರಣದಲ್ಲೇ ಸರಳವಾಗಿ ಆಚರಿಸಲು ಮಾತ್ರ ಅನುಮತಿ ನೀಡಲಾಗಿದೆ. ಭಕ್ತರು ದೇಗುಲಕ್ಕೆ ಬರಬಾರದು ಎಂದು ಮನವಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು