Categories: ಕಲಬುರಗಿ

ಕಲಬುರಗಿ:ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಕೊಲೆ ಮಾಡಿದ ಪತಿ

ಕಲಬುರಗಿ: ನಗರದ ಓಜಾ ಲೇಔಟ್‌ನಲ್ಲಿ ಗುರುವಾರ ತಡರಾತ್ರಿ  ಪದೇಪದೇ ತವರು ಮನೆಗೆ ಹೋಗುತ್ತಾರೆ ಎಂಬ ಕಾರಣಕ್ಕೆ ಪತಿಯೇ ಪತ್ನಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಆರತಿ ರಾಠೋಡ (28) ಕೊಲೆಯಾದವರು. ಪತಿ ತಾರಾಸಿಂಗ್ ರಾಠೋಡ ಆರೋಪಿ.9 ವರ್ಷಗಳ ಹಿಂದೆ ಇವರ ಮದುವೆಯಾಗಿತ್ತು.ಆರತಿ ಅವರು ಪದೇಪದೇ ತವರು ಮನೆಗೆ ಹೋಗುತ್ತಾರೆ ಎಂಬ ಕಾರಣಕ್ಕೆ ಆಗಾಗ ತಂಟೆಗಳು ನಡೆಯುತ್ತಿದ್ದವು. ಗುರುವಾರ ಕೂಡ ಸಂಕ್ರಾಂತಿ ಹಬ್ಬಕ್ಕೆ ತವರು ಮನೆಗೆ ಹೋಗುವ ವಿಚಾರವಾಗಿ ಪತಿ, ಪತ್ನಿ ಮಧ್ಯೆ ಜಗಳವಾಗಿತ್ತು. ಇದರಿಂದ ಕೋಪಗೊಂಡ ತಾರಾಸಿಂಗ್ ರಾತ್ರಿ ಪತ್ನಿ ಮಲಗಿದ್ದಾಗ ಅವರ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿದ. ತೀವ್ರ ರಕ್ತಸ್ರಾವದಿಂದ ಪತ್ನಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ನಡೆಯುತ್ತಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

14 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

57 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

59 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago