ಕಲಬುರ್ಗಿ: ಜೇವರ್ಗಿಯ ಪಿಡಬ್ಲ್ಯೂಡಿಯಲ್ಲಿ ಕಿರಿಯ ಇಂಜಿನಿಯರ್ ಆಗಿದ್ದಂತ ಶಾಂತಗೌಡ ಬಿರಾದಾರ್ ನಿವಾಸದ ಮೇಲೆ ನಿನ್ನ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ದಾಳಿಯ ವೇಳೆಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಸಿದ್ದಂತ ಎಸಿಬಿ ಅಧಿಕಾರಿಗಳು, ಶಾಂತಗೌಡ ಬಿರಾದಾರ ಅವರನ್ನು ವಶಕ್ಕೆ ಪಡೆದಿದ್ದರು. ಇಂತಹ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ನ್ಯಾಯಾಲಯ ಆದೇಶಿಸಿದೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ಭ್ರಷ್ಟ ಸರ್ಕಾರಿ ಅಧಿಕಾರಿಗಳ ಬೇಟೆ ಆಡಿದ್ದರು. 15 ಅಧಿಕಾರಿಗಳ 65ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ, ಮಹತ್ವದ ದಾಖಲೆ, ಅಕ್ರಮ ಹಣ ಪತ್ತೆ ಹಚ್ಚಿದ್ದರು.
ನಿನ್ನೆ ಈ ವೇಳೆ ಶಾಂತಗೌಡ ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ, ಕಲಬುರಗಿ ಜಿಲ್ಲೆ ಇವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಾಗಿತ್ತು.
ಹೀಗೆ ದಾಳಿಯ ವೇಳೆಯಲ್ಲಿ ಕಲಬುರ್ಗಿಯ ಪಿಡಬ್ಲ್ಯೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್ ನಲ್ಲಿ ಕಂತೆ ಕಂತೆ ನೋಟ್ ಪತ್ತೆಯಾಗಿತ್ತು.
ಈ ವೇಳೆ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 ಸ್ಕೂಲ್ ಬಸ್, 2 ಟ್ರಾಕ್ಟರ್ಗಳು, 54,50,000/- ರೂಳ ನಗದು ಹಣ, ಸುಮಾರು 100 ಗ್ರಾಂ ಚಿನ್ನಾಭರಣಗಳು, 36 ಎಕರೆ ಕೃಷಿ ಜಮೀನು, 15 ಲಕ್ಷ ರೂ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ ಎಂಬುದಾಗಿ ಎಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…