News Karnataka Kannada
Sunday, May 12 2024
ಕಲಬುರಗಿ

ಕಲಬುರ್ಗಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Dead Body
Photo Credit :

ಕಲಬುರ್ಗಿ : ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಹೊರವಲಯದ ತೊಗರಿ ಹೊಲದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಕಂಡು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  ಸತ್ಯಸಾಯಿ ವಿವಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ.

ಬೆಳಕೋಟ ಗ್ರಾಮದ ನಿವಾಸಿಯಾಗಿರುವ ಸಿದ್ದಪ್ಪ ದುಬೈಗೆ ಕೆಲಸಕ್ಕೆ ಹೋಗಿದ್ದ. ಕೊರೋನಾ ಸಂದರ್ಭದಲ್ಲಿ ಊರಿಗೆ ಮರಳಿದ ಆತ ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದ. ಕೂಲಿ ಕೆಲಸ ಮಾಡಿಕೊಂಡಿದ್ದು, ನಂತರ ನವನಿಹಾಳ್ ಸಮೀಪದ ಪುಟ್ಟಪರ್ತಿಯ ಸತ್ಯಸಾಯಿ ವಿವಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ದಿನವೂ ಊರಿನಿಂದ ಓಡಾಡುತ್ತಿದ್ದ. ತಡವಾಗಿ ಬರುವುದಾಗಿ ಹೇಳಿದ್ದ ಆತ ರಾತ್ರಿಯಾದರೂ ಮನೆಗೆ ಮರಳದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ನಾವದಗಿ ಗ್ರಾಮದ ಬಳಿ ಸಿದ್ದಪ್ಪನ ಟಿವಿಎಸ್ ಕಂಡುಬಂದಿದೆ. ಸುತ್ತಲೂ ಹುಡುಕಾಡಿದಾಗ ತೊಗರಿ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿವಸ್ತ್ರವಾಗಿ ಬಿದ್ದಿರುವುದು ಕಂಡುಬಂದಿದೆ. ಮಾಹಿತಿ ತಿಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು